ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಆಕಾಶದೆತ್ತರಕ್ಕೆ ಚಿಮ್ಮಿರುವುದು ಚಂದ್ರಯಾನ ನೌಕೆ ಮಾತ್ರವಲ್ಲ; ನಮ್ಮ ಹೃದಯ. ನಮ್ಮ ಹೃದಯ ಮಾತ್ರವಲ್ಲ, ಶತಕೋಟಿ ಭಾರತೀಯರ ಹೃದಯ ಇಂದು ಆಗಸಕ್ಕೆ ಯಶಸ್ವಿಯಾಗಿ ಹಾರಿದೆ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀಮಹಾಸ್ವಾಮೀಜಿ ಬಣ್ಣಿಸಿದ್ದಾರೆ.
ಭಾರತದ ಇತಿಹಾಸದಲ್ಲಿ ಇದು ಅಪರೂಪದಲ್ಲಿ ಅಪರೂಪದ ದಿನ. ಉಡಾವಣೆ ಯಶಸ್ವಿಯಾದದ್ದು ಎಲ್ಲಿಲ್ಲದ ಸಂಭ್ರಮ ತಂದಿದೆ. ನಮಗೇ ಇಷ್ಟು ಖುಷಿಯಾಗಿರಬೇಕಾದರೆ ಆ ವಿಜ್ಞಾನಿಗಳಿಗೆ ಅದೆಷ್ಟು ಸಂಸತಸವಾಗಿರಬೇಡ ಎಂದು ಸ್ವಾಮೀಜಿ ಉದ್ಗರಿಸಿದ್ದಾರೆ.
“ಹಿಂದಿನ ಕಾಲದಲ್ಲಿ ಋಷಿಮುನಿಗಳು ತಪಸ್ಸು ಮಾಡುತ್ತಿದ್ದುದನ್ನು ನಾವು ಕೇಳಿದ್ದೇವೆ. ಇಸ್ರೋದಲ್ಲಿ ವಿಜ್ಞಾನಿಗಳು ಮಾಡುತ್ತಿರುವುದು ತಪಸ್ಸಿಗೆ ಕಡಿಮೆಯೇನೂ ಅಲ್ಲ. ಅವರ ಅಗಾಧವಾದ ಪರಿಶ್ರಮ ಫಲಕೊಟ್ಟು ಆಕಾಶನೌಕೆ ಯಶಸ್ವಿಯಾಗಿ ಉಡಾವಣೆಯಾಗಿರುವುದು ಶತಕೋಟಿ ಭಾರತೀಯರು ಹೆಮ್ಮೆಪಡುವಂಥ ವಿಚಾರ” ಎಂದು ಸಂದೇಶದಲ್ಲಿ ವಿವರಿಸಿದ್ದಾರೆ.
ಆಕಾಶದಲ್ಲಿ ಭಾರತದ ಕೀರ್ತಿಪತಾಕೆ ಹಾರುತ್ತಿದೆ ಎಂಬ ಭಾವನೆ ಬರುತ್ತಿದೆ. ನಾವು, ಧರ್ಮಪುರುಷರೆಲ್ಲ ಸೇರಿ ಅನುಷ್ಠಾನ ಮಡೋಣ. ಶುಭ ಹಾರೈಕೆ ಮಾಡೋಣ. ಈ ನೌಕೆ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯಬೇಕು. ಈ ಯೋಜನೆ ಪರಿಪೂರ್ಣ ಯಶಸ್ಸು ಕಾಣಬೇಕು.
ತನ್ಮೂಲಕ ದೇಶಕ್ಕೆ, ವಿಶ್ವಕ್ಕೆ ಶ್ರೇಯಸ್ಸು ಆಗಬೇಕು. ಆ ಆಕಾಶನೌಕೆ ಚಂದ್ರನಲ್ಲಿ ಇಳಿದು ಭಾರತದ ಕೀರ್ತಿಪತಾಕೆ ಚಂದ್ರನಲ್ಲಿ ಸ್ಥಾಪಿಸುವಂತೆ ಆಗುವ ಸುದಿನಕ್ಕಾಗಿ ಪ್ರತೀಕ್ಷೆ ಮಾಡೋಣ. ನಾವೆಲ್ಲ ಸೇರಿ ಇದಕ್ಕಾಗಿ ಪ್ರಾರ್ಥನೆ ಮಾಡೋಣ, ತಪಸ್ಸು ಮಾಡೋಣ ಎಂದು ಕೋರಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…