ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಆಕಾಶದೆತ್ತರಕ್ಕೆ ಚಿಮ್ಮಿರುವುದು ಚಂದ್ರಯಾನ ನೌಕೆ ಮಾತ್ರವಲ್ಲ; ನಮ್ಮ ಹೃದಯ. ನಮ್ಮ ಹೃದಯ ಮಾತ್ರವಲ್ಲ, ಶತಕೋಟಿ ಭಾರತೀಯರ ಹೃದಯ ಇಂದು ಆಗಸಕ್ಕೆ ಯಶಸ್ವಿಯಾಗಿ ಹಾರಿದೆ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀಮಹಾಸ್ವಾಮೀಜಿ ಬಣ್ಣಿಸಿದ್ದಾರೆ.
ಭಾರತದ ಇತಿಹಾಸದಲ್ಲಿ ಇದು ಅಪರೂಪದಲ್ಲಿ ಅಪರೂಪದ ದಿನ. ಉಡಾವಣೆ ಯಶಸ್ವಿಯಾದದ್ದು ಎಲ್ಲಿಲ್ಲದ ಸಂಭ್ರಮ ತಂದಿದೆ. ನಮಗೇ ಇಷ್ಟು ಖುಷಿಯಾಗಿರಬೇಕಾದರೆ ಆ ವಿಜ್ಞಾನಿಗಳಿಗೆ ಅದೆಷ್ಟು ಸಂಸತಸವಾಗಿರಬೇಡ ಎಂದು ಸ್ವಾಮೀಜಿ ಉದ್ಗರಿಸಿದ್ದಾರೆ.
“ಹಿಂದಿನ ಕಾಲದಲ್ಲಿ ಋಷಿಮುನಿಗಳು ತಪಸ್ಸು ಮಾಡುತ್ತಿದ್ದುದನ್ನು ನಾವು ಕೇಳಿದ್ದೇವೆ. ಇಸ್ರೋದಲ್ಲಿ ವಿಜ್ಞಾನಿಗಳು ಮಾಡುತ್ತಿರುವುದು ತಪಸ್ಸಿಗೆ ಕಡಿಮೆಯೇನೂ ಅಲ್ಲ. ಅವರ ಅಗಾಧವಾದ ಪರಿಶ್ರಮ ಫಲಕೊಟ್ಟು ಆಕಾಶನೌಕೆ ಯಶಸ್ವಿಯಾಗಿ ಉಡಾವಣೆಯಾಗಿರುವುದು ಶತಕೋಟಿ ಭಾರತೀಯರು ಹೆಮ್ಮೆಪಡುವಂಥ ವಿಚಾರ” ಎಂದು ಸಂದೇಶದಲ್ಲಿ ವಿವರಿಸಿದ್ದಾರೆ.
ಆಕಾಶದಲ್ಲಿ ಭಾರತದ ಕೀರ್ತಿಪತಾಕೆ ಹಾರುತ್ತಿದೆ ಎಂಬ ಭಾವನೆ ಬರುತ್ತಿದೆ. ನಾವು, ಧರ್ಮಪುರುಷರೆಲ್ಲ ಸೇರಿ ಅನುಷ್ಠಾನ ಮಡೋಣ. ಶುಭ ಹಾರೈಕೆ ಮಾಡೋಣ. ಈ ನೌಕೆ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯಬೇಕು. ಈ ಯೋಜನೆ ಪರಿಪೂರ್ಣ ಯಶಸ್ಸು ಕಾಣಬೇಕು.
ತನ್ಮೂಲಕ ದೇಶಕ್ಕೆ, ವಿಶ್ವಕ್ಕೆ ಶ್ರೇಯಸ್ಸು ಆಗಬೇಕು. ಆ ಆಕಾಶನೌಕೆ ಚಂದ್ರನಲ್ಲಿ ಇಳಿದು ಭಾರತದ ಕೀರ್ತಿಪತಾಕೆ ಚಂದ್ರನಲ್ಲಿ ಸ್ಥಾಪಿಸುವಂತೆ ಆಗುವ ಸುದಿನಕ್ಕಾಗಿ ಪ್ರತೀಕ್ಷೆ ಮಾಡೋಣ. ನಾವೆಲ್ಲ ಸೇರಿ ಇದಕ್ಕಾಗಿ ಪ್ರಾರ್ಥನೆ ಮಾಡೋಣ, ತಪಸ್ಸು ಮಾಡೋಣ ಎಂದು ಕೋರಿದ್ದಾರೆ.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…