ಚಂದ್ರಯಾನ-3 ಪೂರ್ಣ ಯಶಸ್ಸಿನ ಪ್ರತೀಕ್ಷೆ: ರಾಘವೇಶ್ವರ ಸ್ವಾಮೀಜಿ

ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಆಕಾಶದೆತ್ತರಕ್ಕೆ ಚಿಮ್ಮಿರುವುದು ಚಂದ್ರಯಾನ ನೌಕೆ ಮಾತ್ರವಲ್ಲ; ನಮ್ಮ ಹೃದಯ. ನಮ್ಮ ಹೃದಯ ಮಾತ್ರವಲ್ಲ, ಶತಕೋಟಿ ಭಾರತೀಯರ ಹೃದಯ ಇಂದು ಆಗಸಕ್ಕೆ ಯಶಸ್ವಿಯಾಗಿ ಹಾರಿದೆ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀಮಹಾಸ್ವಾಮೀಜಿ ಬಣ್ಣಿಸಿದ್ದಾರೆ.

ಭಾರತದ ಇತಿಹಾಸದಲ್ಲಿ ಇದು ಅಪರೂಪದಲ್ಲಿ ಅಪರೂಪದ ದಿನ. ಉಡಾವಣೆ ಯಶಸ್ವಿಯಾದದ್ದು ಎಲ್ಲಿಲ್ಲದ ಸಂಭ್ರಮ ತಂದಿದೆ. ನಮಗೇ ಇಷ್ಟು ಖುಷಿಯಾಗಿರಬೇಕಾದರೆ ಆ ವಿಜ್ಞಾನಿಗಳಿಗೆ ಅದೆಷ್ಟು ಸಂಸತಸವಾಗಿರಬೇಡ ಎಂದು ಸ್ವಾಮೀಜಿ ಉದ್ಗರಿಸಿದ್ದಾರೆ.

“ಹಿಂದಿನ ಕಾಲದಲ್ಲಿ ಋಷಿಮುನಿಗಳು ತಪಸ್ಸು ಮಾಡುತ್ತಿದ್ದುದನ್ನು ನಾವು ಕೇಳಿದ್ದೇವೆ. ಇಸ್ರೋದಲ್ಲಿ ವಿಜ್ಞಾನಿಗಳು ಮಾಡುತ್ತಿರುವುದು ತಪಸ್ಸಿಗೆ ಕಡಿಮೆಯೇನೂ ಅಲ್ಲ. ಅವರ ಅಗಾಧವಾದ ಪರಿಶ್ರಮ ಫಲಕೊಟ್ಟು ಆಕಾಶನೌಕೆ ಯಶಸ್ವಿಯಾಗಿ ಉಡಾವಣೆಯಾಗಿರುವುದು ಶತಕೋಟಿ ಭಾರತೀಯರು ಹೆಮ್ಮೆಪಡುವಂಥ ವಿಚಾರ” ಎಂದು ಸಂದೇಶದಲ್ಲಿ ವಿವರಿಸಿದ್ದಾರೆ.

ಆಕಾಶದಲ್ಲಿ ಭಾರತದ ಕೀರ್ತಿಪತಾಕೆ ಹಾರುತ್ತಿದೆ ಎಂಬ ಭಾವನೆ ಬರುತ್ತಿದೆ. ನಾವು, ಧರ್ಮಪುರುಷರೆಲ್ಲ ಸೇರಿ ಅನುಷ್ಠಾನ ಮಡೋಣ. ಶುಭ ಹಾರೈಕೆ ಮಾಡೋಣ. ಈ ನೌಕೆ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯಬೇಕು. ಈ ಯೋಜನೆ ಪರಿಪೂರ್ಣ ಯಶಸ್ಸು ಕಾಣಬೇಕು.

ತನ್ಮೂಲಕ ದೇಶಕ್ಕೆ, ವಿಶ್ವಕ್ಕೆ ಶ್ರೇಯಸ್ಸು ಆಗಬೇಕು. ಆ ಆಕಾಶನೌಕೆ ಚಂದ್ರನಲ್ಲಿ ಇಳಿದು ಭಾರತದ ಕೀರ್ತಿಪತಾಕೆ ಚಂದ್ರನಲ್ಲಿ ಸ್ಥಾಪಿಸುವಂತೆ ಆಗುವ ಸುದಿನಕ್ಕಾಗಿ ಪ್ರತೀಕ್ಷೆ ಮಾಡೋಣ. ನಾವೆಲ್ಲ ಸೇರಿ ಇದಕ್ಕಾಗಿ ಪ್ರಾರ್ಥನೆ ಮಾಡೋಣ, ತಪಸ್ಸು ಮಾಡೋಣ ಎಂದು ಕೋರಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

9 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

15 hours ago