ಚಂದ್ರಯಾನ-3 ಪೂರ್ಣ ಯಶಸ್ಸಿನ ಪ್ರತೀಕ್ಷೆ: ರಾಘವೇಶ್ವರ ಸ್ವಾಮೀಜಿ

ಬಹುನಿರೀಕ್ಷಿತ ಚಂದ್ರಯಾನ-3 ಗಗನನೌಕೆ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಆಕಾಶದೆತ್ತರಕ್ಕೆ ಚಿಮ್ಮಿರುವುದು ಚಂದ್ರಯಾನ ನೌಕೆ ಮಾತ್ರವಲ್ಲ; ನಮ್ಮ ಹೃದಯ. ನಮ್ಮ ಹೃದಯ ಮಾತ್ರವಲ್ಲ, ಶತಕೋಟಿ ಭಾರತೀಯರ ಹೃದಯ ಇಂದು ಆಗಸಕ್ಕೆ ಯಶಸ್ವಿಯಾಗಿ ಹಾರಿದೆ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀಮಹಾಸ್ವಾಮೀಜಿ ಬಣ್ಣಿಸಿದ್ದಾರೆ.

ಭಾರತದ ಇತಿಹಾಸದಲ್ಲಿ ಇದು ಅಪರೂಪದಲ್ಲಿ ಅಪರೂಪದ ದಿನ. ಉಡಾವಣೆ ಯಶಸ್ವಿಯಾದದ್ದು ಎಲ್ಲಿಲ್ಲದ ಸಂಭ್ರಮ ತಂದಿದೆ. ನಮಗೇ ಇಷ್ಟು ಖುಷಿಯಾಗಿರಬೇಕಾದರೆ ಆ ವಿಜ್ಞಾನಿಗಳಿಗೆ ಅದೆಷ್ಟು ಸಂಸತಸವಾಗಿರಬೇಡ ಎಂದು ಸ್ವಾಮೀಜಿ ಉದ್ಗರಿಸಿದ್ದಾರೆ.

“ಹಿಂದಿನ ಕಾಲದಲ್ಲಿ ಋಷಿಮುನಿಗಳು ತಪಸ್ಸು ಮಾಡುತ್ತಿದ್ದುದನ್ನು ನಾವು ಕೇಳಿದ್ದೇವೆ. ಇಸ್ರೋದಲ್ಲಿ ವಿಜ್ಞಾನಿಗಳು ಮಾಡುತ್ತಿರುವುದು ತಪಸ್ಸಿಗೆ ಕಡಿಮೆಯೇನೂ ಅಲ್ಲ. ಅವರ ಅಗಾಧವಾದ ಪರಿಶ್ರಮ ಫಲಕೊಟ್ಟು ಆಕಾಶನೌಕೆ ಯಶಸ್ವಿಯಾಗಿ ಉಡಾವಣೆಯಾಗಿರುವುದು ಶತಕೋಟಿ ಭಾರತೀಯರು ಹೆಮ್ಮೆಪಡುವಂಥ ವಿಚಾರ” ಎಂದು ಸಂದೇಶದಲ್ಲಿ ವಿವರಿಸಿದ್ದಾರೆ.

ಆಕಾಶದಲ್ಲಿ ಭಾರತದ ಕೀರ್ತಿಪತಾಕೆ ಹಾರುತ್ತಿದೆ ಎಂಬ ಭಾವನೆ ಬರುತ್ತಿದೆ. ನಾವು, ಧರ್ಮಪುರುಷರೆಲ್ಲ ಸೇರಿ ಅನುಷ್ಠಾನ ಮಡೋಣ. ಶುಭ ಹಾರೈಕೆ ಮಾಡೋಣ. ಈ ನೌಕೆ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯಬೇಕು. ಈ ಯೋಜನೆ ಪರಿಪೂರ್ಣ ಯಶಸ್ಸು ಕಾಣಬೇಕು.

ತನ್ಮೂಲಕ ದೇಶಕ್ಕೆ, ವಿಶ್ವಕ್ಕೆ ಶ್ರೇಯಸ್ಸು ಆಗಬೇಕು. ಆ ಆಕಾಶನೌಕೆ ಚಂದ್ರನಲ್ಲಿ ಇಳಿದು ಭಾರತದ ಕೀರ್ತಿಪತಾಕೆ ಚಂದ್ರನಲ್ಲಿ ಸ್ಥಾಪಿಸುವಂತೆ ಆಗುವ ಸುದಿನಕ್ಕಾಗಿ ಪ್ರತೀಕ್ಷೆ ಮಾಡೋಣ. ನಾವೆಲ್ಲ ಸೇರಿ ಇದಕ್ಕಾಗಿ ಪ್ರಾರ್ಥನೆ ಮಾಡೋಣ, ತಪಸ್ಸು ಮಾಡೋಣ ಎಂದು ಕೋರಿದ್ದಾರೆ.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

5 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago