ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಡಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿದ್ದು ಸುರಕ್ಷಿತವಾಗಿ ಯಶಸ್ವಿಯಾಗಲೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಕ್ಷಿಣ ಕಾಶಿ ಎಂದು ಪ್ರಸಿದ್ಧಿಯಾದ ಶಿವಗಂಗೆ ಶ್ರೀ ಗಂಗಾಧರೇಶ್ವರ ಹಾಗೂ ಹೊನ್ನಾದೇವಿ ದೇವಾಲಯದಲ್ಲಿ ಇಸ್ರೋ ಸಂಸ್ಥೆ ಹಾಗೂ ಚಂದ್ರಯಾನ – 3 ಹೆಸರಿನಲ್ಲಿ ಜಗದೀಶ್ ಚೌದರಿ, ಮುರುಳಿಗೌಡ ನೇತೃತ್ವದಲ್ಲಿ ಅರ್ಚನೆ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು.
ತಾಲೂಕಿನ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಚೌಧರಿ ಮಾತನಾಡಿ, ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲಿ ಎಂದು ಸಂಕಲ್ಪ ಮಾಡಿದ್ದೇವೆ, 3.84ಲಕ್ಷ ಕಿಲೋಮೀಟರ್ ದೂರದಲ್ಲಿ ಇಸ್ರೋ ತನ್ನ ಸಾಧನೆಯನ್ನು ಹಲವಾರು ವರ್ಷಗಳಿಂದ ಮಾಡುತ್ತಾ ಬಂದಿದೆ, ಈ ಸಾರಿ 41 ದಿನದ ಪ್ರಯತ್ನಕ್ಕೆ ಯಶಸ್ಸು ಸಿಗಲಿ ಎಂದು ಪ್ರಾರ್ಥಿಸಿದ್ದೇವೆ, ತಾಲೂಕಿನ ದಕ್ಷಿಣಕಾಶಿ ಶಿವಗಂಗೆ ಐತಿಹಾಸಿಕ ಕ್ಷೇತ್ರದಲ್ಲಿ ಹರಕೆ ಈಡೇರಲಿ, ಚಂದ್ರಯಾನ-3 ಯಶಸ್ಸು ಕಾಣಲಿ ಎಂಬುದೇ ನಮ್ಮ ಉದ್ದೇಶ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಘಟಕದ ಹೋಬಳಿ ಅಧ್ಯಕ್ಷ ಕೆಂಗಲ್ ಕೆಂಪೋಹಳ್ಳಿ ಮುರುಳೀಧರ್(ಮಧು), ರುದ್ರಣ್ಣ, ಅರ್ಚಕರಾದ ರಾಜು ದೀಕ್ಷಿತ್, ಶ್ರೀಧರ್ ದೀಕ್ಷೀತ್, ಕಾರ್ತಿಕ್ ದೀಕ್ಷಿತ್, ಗುಂಡ ದೀಕ್ಷಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…