ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಡಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿದ್ದು ಸುರಕ್ಷಿತವಾಗಿ ಯಶಸ್ವಿಯಾಗಲೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಕ್ಷಿಣ ಕಾಶಿ ಎಂದು ಪ್ರಸಿದ್ಧಿಯಾದ ಶಿವಗಂಗೆ ಶ್ರೀ ಗಂಗಾಧರೇಶ್ವರ ಹಾಗೂ ಹೊನ್ನಾದೇವಿ ದೇವಾಲಯದಲ್ಲಿ ಇಸ್ರೋ ಸಂಸ್ಥೆ ಹಾಗೂ ಚಂದ್ರಯಾನ – 3 ಹೆಸರಿನಲ್ಲಿ ಜಗದೀಶ್ ಚೌದರಿ, ಮುರುಳಿಗೌಡ ನೇತೃತ್ವದಲ್ಲಿ ಅರ್ಚನೆ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು.
ತಾಲೂಕಿನ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಚೌಧರಿ ಮಾತನಾಡಿ, ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲಿ ಎಂದು ಸಂಕಲ್ಪ ಮಾಡಿದ್ದೇವೆ, 3.84ಲಕ್ಷ ಕಿಲೋಮೀಟರ್ ದೂರದಲ್ಲಿ ಇಸ್ರೋ ತನ್ನ ಸಾಧನೆಯನ್ನು ಹಲವಾರು ವರ್ಷಗಳಿಂದ ಮಾಡುತ್ತಾ ಬಂದಿದೆ, ಈ ಸಾರಿ 41 ದಿನದ ಪ್ರಯತ್ನಕ್ಕೆ ಯಶಸ್ಸು ಸಿಗಲಿ ಎಂದು ಪ್ರಾರ್ಥಿಸಿದ್ದೇವೆ, ತಾಲೂಕಿನ ದಕ್ಷಿಣಕಾಶಿ ಶಿವಗಂಗೆ ಐತಿಹಾಸಿಕ ಕ್ಷೇತ್ರದಲ್ಲಿ ಹರಕೆ ಈಡೇರಲಿ, ಚಂದ್ರಯಾನ-3 ಯಶಸ್ಸು ಕಾಣಲಿ ಎಂಬುದೇ ನಮ್ಮ ಉದ್ದೇಶ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಘಟಕದ ಹೋಬಳಿ ಅಧ್ಯಕ್ಷ ಕೆಂಗಲ್ ಕೆಂಪೋಹಳ್ಳಿ ಮುರುಳೀಧರ್(ಮಧು), ರುದ್ರಣ್ಣ, ಅರ್ಚಕರಾದ ರಾಜು ದೀಕ್ಷಿತ್, ಶ್ರೀಧರ್ ದೀಕ್ಷೀತ್, ಕಾರ್ತಿಕ್ ದೀಕ್ಷಿತ್, ಗುಂಡ ದೀಕ್ಷಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…