ಚಂದ್ರಯಾನ -3 ಯಶಸ್ವಿಯಾಗಲೆಂದು ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

 

ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಡಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿದ್ದು ಸುರಕ್ಷಿತವಾಗಿ ಯಶಸ್ವಿಯಾಗಲೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಕ್ಷಿಣ ಕಾಶಿ ಎಂದು ಪ್ರಸಿದ್ಧಿಯಾದ ಶಿವಗಂಗೆ ಶ್ರೀ ಗಂಗಾಧರೇಶ್ವರ ಹಾಗೂ ಹೊನ್ನಾದೇವಿ ದೇವಾಲಯದಲ್ಲಿ ಇಸ್ರೋ ಸಂಸ್ಥೆ ಹಾಗೂ ಚಂದ್ರಯಾನ – 3 ಹೆಸರಿನಲ್ಲಿ ಜಗದೀಶ್ ಚೌದರಿ, ಮುರುಳಿಗೌಡ ನೇತೃತ್ವದಲ್ಲಿ ಅರ್ಚನೆ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು.

ತಾಲೂಕಿನ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಚೌಧರಿ ಮಾತನಾಡಿ, ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲಿ ಎಂದು ಸಂಕಲ್ಪ ಮಾಡಿದ್ದೇವೆ, 3.84ಲಕ್ಷ ಕಿಲೋಮೀಟರ್ ದೂರದಲ್ಲಿ ಇಸ್ರೋ ತನ್ನ ಸಾಧನೆಯನ್ನು ಹಲವಾರು ವರ್ಷಗಳಿಂದ ಮಾಡುತ್ತಾ ಬಂದಿದೆ, ಈ ಸಾರಿ 41 ದಿನದ ಪ್ರಯತ್ನಕ್ಕೆ ಯಶಸ್ಸು ಸಿಗಲಿ ಎಂದು ಪ್ರಾರ್ಥಿಸಿದ್ದೇವೆ, ತಾಲೂಕಿನ ದಕ್ಷಿಣಕಾಶಿ ಶಿವಗಂಗೆ ಐತಿಹಾಸಿಕ ಕ್ಷೇತ್ರದಲ್ಲಿ ಹರಕೆ ಈಡೇರಲಿ, ಚಂದ್ರಯಾನ-3 ಯಶಸ್ಸು ಕಾಣಲಿ ಎಂಬುದೇ ನಮ್ಮ ಉದ್ದೇಶ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಘಟಕದ ಹೋಬಳಿ ಅಧ್ಯಕ್ಷ ಕೆಂಗಲ್ ಕೆಂಪೋಹಳ್ಳಿ ಮುರುಳೀಧರ್(ಮಧು), ರುದ್ರಣ್ಣ, ಅರ್ಚಕರಾದ ರಾಜು ದೀಕ್ಷಿತ್, ಶ್ರೀಧರ್ ದೀಕ್ಷೀತ್, ಕಾರ್ತಿಕ್ ದೀಕ್ಷಿತ್, ಗುಂಡ ದೀಕ್ಷಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

9 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

13 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

13 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

16 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago