Categories: ಪರಿಸರ

ಚನ್ನಗಿರಿಯಲ್ಲಿ ಕಂಡುಬಂದ ವಿವಿಧ ಬಗೆಯ ಕ್ಯಾಟರ್ ಪಿಲ್ಲರ್ ಗಳು

ದೊಡ್ಡಬಳ್ಳಾಪುರ: ಚಾರಣ ಅನ್ನುವುದು ಬೆಟ್ಟದ ತುದಿಯನ್ನು ಸಾಧ್ಯವಾದಷ್ಟು ಬೇಗೆ ಹೋಗಿ ಮುಟ್ಟುವುದು, ಬೆಟ್ಟದ ತುದಿಯಲ್ಲಿ ನಿಂತು ಸುತ್ತಲಿನ ಪರಿಸರವನ್ನೊಮ್ಮೆ ಸಿಂಹಾವಲೋಕನ ಮಾಡಿ ಖುಷಿ ಪಟ್ಟರೆ ಚಾರಣದ ಉದ್ದೇಶ ಸಾರ್ಥಕ.

ಇದರ ಜೊತೆಗೆ ಈ ಚಾರಣವನ್ನು ಮತ್ತಷ್ಟು ಸಾರ್ಥಕಗೊಳಿಸುವ ಉದ್ದೇಶದಿಂದ ಪ್ರಾರಂಭಿಸಲಾಗಿರುವುದೇ ‘ನಿಸರ್ಗನಡಿಗೆ’. ಈ ನಡಿಗೆಯಲ್ಲಿ ಬೆಟ್ಟದ ತುದಿ ಮುಟ್ಟುವುದರ ಜೊತೆಗೆ ನಿಸರ್ಗದ ಹಾದಿಯಲ್ಲಿ ಸಾಗುವಾಗ ಎದುರಾಗುವ ವಿವಿಧ ಜಾತಿಯ ಸಸ್ಯಗಳು, ಗಿಡ, ಮರ, ಕೀಟ,‌ ಪಕ್ಷಿ, ಪುಟ್ಟ ಪ್ರಾಣಿಗಳು ಹೀಗೆ ಕಣ್ಣಿಗೆ ಕಾಣುವ ಜೀವ ವೈದ್ಯದ ಬಗ್ಗೆ ಕ್ರಮಬದ್ದವಾಗಿ ತಿಳಿಯುತ್ತ ಸಾಗುವುದೇ ‘ನಿಸರ್ಗನಡಿಗೆ’ಯ ಮುಖ್ಯ ಉದ್ದೇಶವಾಗಿದೆ ಎನ್ನುತ್ತಾರೆ ಯುವ ಸಂಚಲನ ಟ್ರಸ್ಟ್ ಅಧ್ಯಕ್ಷ ಚಿದಾನಂದ ಆರಾಧ್ಯ.

ಈ ವಾರ ತಾಲ್ಲೂಕಿನ ಚನ್ನಗಿರಿಯಲ್ಲಿ ನಡೆದ ನಿಸರ್ಗ ನಡಿಗೆಯಲ್ಲಿ ಎದುರಾದಗಿದ್ದು ವಿವಿಧ ಬಗೆಯ ಕ್ಯಾಟರ್ಪಿಲ್ಲರ್ಗಳು. ಇಷ್ಟು ಬೇಗನೆ ಇವು ನಿಸರ್ಗನಡಿಗೆಯಲ್ಲಿ ಎದುರುಗೊಳ್ಳಲು ಕಾರಣ ಈ ವರ್ಷ ತಾಲ್ಲೂಕಿನಲ್ಲಿ ಬೇಸಿಗೆಯ ಬಿಸಿಲು ಅನುಭವಕ್ಕೆ ಬರುವ ಮುನ್ನವೇ ಮಳೆ ಪ್ರಾರಂಭವಾಗಿತ್ತು. ಮಾರ್ಚ್ ಅಂತ್ಯದಿಂದಲೇ ಪ್ರಾರಂಭವಾದ ಮಳೆ ಹದವಾಗಿ ಬೀಳುತ್ತಲೇ ಇದೆ. ಕೆರೆ ಕುಂಟೆಗಳಿಗೆ ನೀರು ಬಂದಿಲ್ಲವಾದರು ಬೆಟ್ಟ ಗುಡ್ಡಗಳಲ್ಲಿ, ಅರಣ್ಯ ಪ್ರದೇಶದಲ್ಲಿ ಬೆಳೆದು ನಿಂತಿರುವ ಹಚ್ಚ ಹಸಿರಿನ ಮರಗಳು ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತಿವೆ. ಹಾಗೆಯೇ ಪ್ರಕೃತಿಯಲ್ಲಿನ ಜೀವ ವೈವಿದ್ಯ ಕೀಟ, ಪಕ್ಷಿಗಳು ಮೈ ಕೊಡವಿಕೊಂಡು ಹೊರಬಂದಿವೆ ಎಂದರು.

ನಿಸರ್ಗ ನಡಿಗೆಯಲ್ಲಿ ಎದುರಾಗುವ ಸಸ್ಯ,ಕೀಟಗಳ ಬಗ್ಗೆ ಸಸ್ಯವಿಜ್ಞಾನಿ ಡಾ.ಆರ್.ಗಣೇಶನ್ ಅವರ ವಿವರಣೆ ಕೇಳುತ್ತಲೇ ಬೆಟ್ಟದ ತುದಿ ಮುಟ್ಟಿ ಮತ್ತೆ ಕೆಳಗೆ ಇಳಿಯುವಷ್ಟರಲ್ಲಿ ನಿಸರ್ಗ ನಡಿಗೆ ಸಾರ್ಥಕವಾಗುತ್ತದೆ ಎಂದು ನೆನಪಿಸಿಕೊಂಡರು ನಡಿಗೆಯಲ್ಲಿ ಭಾಗವಹಿಸಿದ್ದವರು.

Ramesh Babu

Journalist

Recent Posts

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

1 hour ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

2 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

2 hours ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

4 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

4 hours ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

19 hours ago