Categories: ಪರಿಸರ

ಚನ್ನಗಿರಿಯಲ್ಲಿ ಕಂಡುಬಂದ ವಿವಿಧ ಬಗೆಯ ಕ್ಯಾಟರ್ ಪಿಲ್ಲರ್ ಗಳು

ದೊಡ್ಡಬಳ್ಳಾಪುರ: ಚಾರಣ ಅನ್ನುವುದು ಬೆಟ್ಟದ ತುದಿಯನ್ನು ಸಾಧ್ಯವಾದಷ್ಟು ಬೇಗೆ ಹೋಗಿ ಮುಟ್ಟುವುದು, ಬೆಟ್ಟದ ತುದಿಯಲ್ಲಿ ನಿಂತು ಸುತ್ತಲಿನ ಪರಿಸರವನ್ನೊಮ್ಮೆ ಸಿಂಹಾವಲೋಕನ ಮಾಡಿ ಖುಷಿ ಪಟ್ಟರೆ ಚಾರಣದ ಉದ್ದೇಶ ಸಾರ್ಥಕ.

ಇದರ ಜೊತೆಗೆ ಈ ಚಾರಣವನ್ನು ಮತ್ತಷ್ಟು ಸಾರ್ಥಕಗೊಳಿಸುವ ಉದ್ದೇಶದಿಂದ ಪ್ರಾರಂಭಿಸಲಾಗಿರುವುದೇ ‘ನಿಸರ್ಗನಡಿಗೆ’. ಈ ನಡಿಗೆಯಲ್ಲಿ ಬೆಟ್ಟದ ತುದಿ ಮುಟ್ಟುವುದರ ಜೊತೆಗೆ ನಿಸರ್ಗದ ಹಾದಿಯಲ್ಲಿ ಸಾಗುವಾಗ ಎದುರಾಗುವ ವಿವಿಧ ಜಾತಿಯ ಸಸ್ಯಗಳು, ಗಿಡ, ಮರ, ಕೀಟ,‌ ಪಕ್ಷಿ, ಪುಟ್ಟ ಪ್ರಾಣಿಗಳು ಹೀಗೆ ಕಣ್ಣಿಗೆ ಕಾಣುವ ಜೀವ ವೈದ್ಯದ ಬಗ್ಗೆ ಕ್ರಮಬದ್ದವಾಗಿ ತಿಳಿಯುತ್ತ ಸಾಗುವುದೇ ‘ನಿಸರ್ಗನಡಿಗೆ’ಯ ಮುಖ್ಯ ಉದ್ದೇಶವಾಗಿದೆ ಎನ್ನುತ್ತಾರೆ ಯುವ ಸಂಚಲನ ಟ್ರಸ್ಟ್ ಅಧ್ಯಕ್ಷ ಚಿದಾನಂದ ಆರಾಧ್ಯ.

ಈ ವಾರ ತಾಲ್ಲೂಕಿನ ಚನ್ನಗಿರಿಯಲ್ಲಿ ನಡೆದ ನಿಸರ್ಗ ನಡಿಗೆಯಲ್ಲಿ ಎದುರಾದಗಿದ್ದು ವಿವಿಧ ಬಗೆಯ ಕ್ಯಾಟರ್ಪಿಲ್ಲರ್ಗಳು. ಇಷ್ಟು ಬೇಗನೆ ಇವು ನಿಸರ್ಗನಡಿಗೆಯಲ್ಲಿ ಎದುರುಗೊಳ್ಳಲು ಕಾರಣ ಈ ವರ್ಷ ತಾಲ್ಲೂಕಿನಲ್ಲಿ ಬೇಸಿಗೆಯ ಬಿಸಿಲು ಅನುಭವಕ್ಕೆ ಬರುವ ಮುನ್ನವೇ ಮಳೆ ಪ್ರಾರಂಭವಾಗಿತ್ತು. ಮಾರ್ಚ್ ಅಂತ್ಯದಿಂದಲೇ ಪ್ರಾರಂಭವಾದ ಮಳೆ ಹದವಾಗಿ ಬೀಳುತ್ತಲೇ ಇದೆ. ಕೆರೆ ಕುಂಟೆಗಳಿಗೆ ನೀರು ಬಂದಿಲ್ಲವಾದರು ಬೆಟ್ಟ ಗುಡ್ಡಗಳಲ್ಲಿ, ಅರಣ್ಯ ಪ್ರದೇಶದಲ್ಲಿ ಬೆಳೆದು ನಿಂತಿರುವ ಹಚ್ಚ ಹಸಿರಿನ ಮರಗಳು ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತಿವೆ. ಹಾಗೆಯೇ ಪ್ರಕೃತಿಯಲ್ಲಿನ ಜೀವ ವೈವಿದ್ಯ ಕೀಟ, ಪಕ್ಷಿಗಳು ಮೈ ಕೊಡವಿಕೊಂಡು ಹೊರಬಂದಿವೆ ಎಂದರು.

ನಿಸರ್ಗ ನಡಿಗೆಯಲ್ಲಿ ಎದುರಾಗುವ ಸಸ್ಯ,ಕೀಟಗಳ ಬಗ್ಗೆ ಸಸ್ಯವಿಜ್ಞಾನಿ ಡಾ.ಆರ್.ಗಣೇಶನ್ ಅವರ ವಿವರಣೆ ಕೇಳುತ್ತಲೇ ಬೆಟ್ಟದ ತುದಿ ಮುಟ್ಟಿ ಮತ್ತೆ ಕೆಳಗೆ ಇಳಿಯುವಷ್ಟರಲ್ಲಿ ನಿಸರ್ಗ ನಡಿಗೆ ಸಾರ್ಥಕವಾಗುತ್ತದೆ ಎಂದು ನೆನಪಿಸಿಕೊಂಡರು ನಡಿಗೆಯಲ್ಲಿ ಭಾಗವಹಿಸಿದ್ದವರು.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

34 minutes ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

10 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

12 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

13 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago