ದೊಡ್ಡಬಳ್ಳಾಪುರ: ಚಾರಣ ಅನ್ನುವುದು ಬೆಟ್ಟದ ತುದಿಯನ್ನು ಸಾಧ್ಯವಾದಷ್ಟು ಬೇಗೆ ಹೋಗಿ ಮುಟ್ಟುವುದು, ಬೆಟ್ಟದ ತುದಿಯಲ್ಲಿ ನಿಂತು ಸುತ್ತಲಿನ ಪರಿಸರವನ್ನೊಮ್ಮೆ ಸಿಂಹಾವಲೋಕನ ಮಾಡಿ ಖುಷಿ ಪಟ್ಟರೆ ಚಾರಣದ ಉದ್ದೇಶ ಸಾರ್ಥಕ.
ಇದರ ಜೊತೆಗೆ ಈ ಚಾರಣವನ್ನು ಮತ್ತಷ್ಟು ಸಾರ್ಥಕಗೊಳಿಸುವ ಉದ್ದೇಶದಿಂದ ಪ್ರಾರಂಭಿಸಲಾಗಿರುವುದೇ ‘ನಿಸರ್ಗನಡಿಗೆ’. ಈ ನಡಿಗೆಯಲ್ಲಿ ಬೆಟ್ಟದ ತುದಿ ಮುಟ್ಟುವುದರ ಜೊತೆಗೆ ನಿಸರ್ಗದ ಹಾದಿಯಲ್ಲಿ ಸಾಗುವಾಗ ಎದುರಾಗುವ ವಿವಿಧ ಜಾತಿಯ ಸಸ್ಯಗಳು, ಗಿಡ, ಮರ, ಕೀಟ, ಪಕ್ಷಿ, ಪುಟ್ಟ ಪ್ರಾಣಿಗಳು ಹೀಗೆ ಕಣ್ಣಿಗೆ ಕಾಣುವ ಜೀವ ವೈದ್ಯದ ಬಗ್ಗೆ ಕ್ರಮಬದ್ದವಾಗಿ ತಿಳಿಯುತ್ತ ಸಾಗುವುದೇ ‘ನಿಸರ್ಗನಡಿಗೆ’ಯ ಮುಖ್ಯ ಉದ್ದೇಶವಾಗಿದೆ ಎನ್ನುತ್ತಾರೆ ಯುವ ಸಂಚಲನ ಟ್ರಸ್ಟ್ ಅಧ್ಯಕ್ಷ ಚಿದಾನಂದ ಆರಾಧ್ಯ.
ಈ ವಾರ ತಾಲ್ಲೂಕಿನ ಚನ್ನಗಿರಿಯಲ್ಲಿ ನಡೆದ ನಿಸರ್ಗ ನಡಿಗೆಯಲ್ಲಿ ಎದುರಾದಗಿದ್ದು ವಿವಿಧ ಬಗೆಯ ಕ್ಯಾಟರ್ಪಿಲ್ಲರ್ಗಳು. ಇಷ್ಟು ಬೇಗನೆ ಇವು ನಿಸರ್ಗನಡಿಗೆಯಲ್ಲಿ ಎದುರುಗೊಳ್ಳಲು ಕಾರಣ ಈ ವರ್ಷ ತಾಲ್ಲೂಕಿನಲ್ಲಿ ಬೇಸಿಗೆಯ ಬಿಸಿಲು ಅನುಭವಕ್ಕೆ ಬರುವ ಮುನ್ನವೇ ಮಳೆ ಪ್ರಾರಂಭವಾಗಿತ್ತು. ಮಾರ್ಚ್ ಅಂತ್ಯದಿಂದಲೇ ಪ್ರಾರಂಭವಾದ ಮಳೆ ಹದವಾಗಿ ಬೀಳುತ್ತಲೇ ಇದೆ. ಕೆರೆ ಕುಂಟೆಗಳಿಗೆ ನೀರು ಬಂದಿಲ್ಲವಾದರು ಬೆಟ್ಟ ಗುಡ್ಡಗಳಲ್ಲಿ, ಅರಣ್ಯ ಪ್ರದೇಶದಲ್ಲಿ ಬೆಳೆದು ನಿಂತಿರುವ ಹಚ್ಚ ಹಸಿರಿನ ಮರಗಳು ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತಿವೆ. ಹಾಗೆಯೇ ಪ್ರಕೃತಿಯಲ್ಲಿನ ಜೀವ ವೈವಿದ್ಯ ಕೀಟ, ಪಕ್ಷಿಗಳು ಮೈ ಕೊಡವಿಕೊಂಡು ಹೊರಬಂದಿವೆ ಎಂದರು.
ನಿಸರ್ಗ ನಡಿಗೆಯಲ್ಲಿ ಎದುರಾಗುವ ಸಸ್ಯ,ಕೀಟಗಳ ಬಗ್ಗೆ ಸಸ್ಯವಿಜ್ಞಾನಿ ಡಾ.ಆರ್.ಗಣೇಶನ್ ಅವರ ವಿವರಣೆ ಕೇಳುತ್ತಲೇ ಬೆಟ್ಟದ ತುದಿ ಮುಟ್ಟಿ ಮತ್ತೆ ಕೆಳಗೆ ಇಳಿಯುವಷ್ಟರಲ್ಲಿ ನಿಸರ್ಗ ನಡಿಗೆ ಸಾರ್ಥಕವಾಗುತ್ತದೆ ಎಂದು ನೆನಪಿಸಿಕೊಂಡರು ನಡಿಗೆಯಲ್ಲಿ ಭಾಗವಹಿಸಿದ್ದವರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…