Categories: ಪರಿಸರ

ಚನ್ನಗಿರಿಯಲ್ಲಿ ಕಂಡುಬಂದ ವಿವಿಧ ಬಗೆಯ ಕ್ಯಾಟರ್ ಪಿಲ್ಲರ್ ಗಳು

ದೊಡ್ಡಬಳ್ಳಾಪುರ: ಚಾರಣ ಅನ್ನುವುದು ಬೆಟ್ಟದ ತುದಿಯನ್ನು ಸಾಧ್ಯವಾದಷ್ಟು ಬೇಗೆ ಹೋಗಿ ಮುಟ್ಟುವುದು, ಬೆಟ್ಟದ ತುದಿಯಲ್ಲಿ ನಿಂತು ಸುತ್ತಲಿನ ಪರಿಸರವನ್ನೊಮ್ಮೆ ಸಿಂಹಾವಲೋಕನ ಮಾಡಿ ಖುಷಿ ಪಟ್ಟರೆ ಚಾರಣದ ಉದ್ದೇಶ ಸಾರ್ಥಕ.

ಇದರ ಜೊತೆಗೆ ಈ ಚಾರಣವನ್ನು ಮತ್ತಷ್ಟು ಸಾರ್ಥಕಗೊಳಿಸುವ ಉದ್ದೇಶದಿಂದ ಪ್ರಾರಂಭಿಸಲಾಗಿರುವುದೇ ‘ನಿಸರ್ಗನಡಿಗೆ’. ಈ ನಡಿಗೆಯಲ್ಲಿ ಬೆಟ್ಟದ ತುದಿ ಮುಟ್ಟುವುದರ ಜೊತೆಗೆ ನಿಸರ್ಗದ ಹಾದಿಯಲ್ಲಿ ಸಾಗುವಾಗ ಎದುರಾಗುವ ವಿವಿಧ ಜಾತಿಯ ಸಸ್ಯಗಳು, ಗಿಡ, ಮರ, ಕೀಟ,‌ ಪಕ್ಷಿ, ಪುಟ್ಟ ಪ್ರಾಣಿಗಳು ಹೀಗೆ ಕಣ್ಣಿಗೆ ಕಾಣುವ ಜೀವ ವೈದ್ಯದ ಬಗ್ಗೆ ಕ್ರಮಬದ್ದವಾಗಿ ತಿಳಿಯುತ್ತ ಸಾಗುವುದೇ ‘ನಿಸರ್ಗನಡಿಗೆ’ಯ ಮುಖ್ಯ ಉದ್ದೇಶವಾಗಿದೆ ಎನ್ನುತ್ತಾರೆ ಯುವ ಸಂಚಲನ ಟ್ರಸ್ಟ್ ಅಧ್ಯಕ್ಷ ಚಿದಾನಂದ ಆರಾಧ್ಯ.

ಈ ವಾರ ತಾಲ್ಲೂಕಿನ ಚನ್ನಗಿರಿಯಲ್ಲಿ ನಡೆದ ನಿಸರ್ಗ ನಡಿಗೆಯಲ್ಲಿ ಎದುರಾದಗಿದ್ದು ವಿವಿಧ ಬಗೆಯ ಕ್ಯಾಟರ್ಪಿಲ್ಲರ್ಗಳು. ಇಷ್ಟು ಬೇಗನೆ ಇವು ನಿಸರ್ಗನಡಿಗೆಯಲ್ಲಿ ಎದುರುಗೊಳ್ಳಲು ಕಾರಣ ಈ ವರ್ಷ ತಾಲ್ಲೂಕಿನಲ್ಲಿ ಬೇಸಿಗೆಯ ಬಿಸಿಲು ಅನುಭವಕ್ಕೆ ಬರುವ ಮುನ್ನವೇ ಮಳೆ ಪ್ರಾರಂಭವಾಗಿತ್ತು. ಮಾರ್ಚ್ ಅಂತ್ಯದಿಂದಲೇ ಪ್ರಾರಂಭವಾದ ಮಳೆ ಹದವಾಗಿ ಬೀಳುತ್ತಲೇ ಇದೆ. ಕೆರೆ ಕುಂಟೆಗಳಿಗೆ ನೀರು ಬಂದಿಲ್ಲವಾದರು ಬೆಟ್ಟ ಗುಡ್ಡಗಳಲ್ಲಿ, ಅರಣ್ಯ ಪ್ರದೇಶದಲ್ಲಿ ಬೆಳೆದು ನಿಂತಿರುವ ಹಚ್ಚ ಹಸಿರಿನ ಮರಗಳು ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತಿವೆ. ಹಾಗೆಯೇ ಪ್ರಕೃತಿಯಲ್ಲಿನ ಜೀವ ವೈವಿದ್ಯ ಕೀಟ, ಪಕ್ಷಿಗಳು ಮೈ ಕೊಡವಿಕೊಂಡು ಹೊರಬಂದಿವೆ ಎಂದರು.

ನಿಸರ್ಗ ನಡಿಗೆಯಲ್ಲಿ ಎದುರಾಗುವ ಸಸ್ಯ,ಕೀಟಗಳ ಬಗ್ಗೆ ಸಸ್ಯವಿಜ್ಞಾನಿ ಡಾ.ಆರ್.ಗಣೇಶನ್ ಅವರ ವಿವರಣೆ ಕೇಳುತ್ತಲೇ ಬೆಟ್ಟದ ತುದಿ ಮುಟ್ಟಿ ಮತ್ತೆ ಕೆಳಗೆ ಇಳಿಯುವಷ್ಟರಲ್ಲಿ ನಿಸರ್ಗ ನಡಿಗೆ ಸಾರ್ಥಕವಾಗುತ್ತದೆ ಎಂದು ನೆನಪಿಸಿಕೊಂಡರು ನಡಿಗೆಯಲ್ಲಿ ಭಾಗವಹಿಸಿದ್ದವರು.

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 hour ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 hour ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

12 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

12 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

15 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

18 hours ago