ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರೆ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆ ವಿಷಯ ಕುರಿತಂತೆ ನಡೆಸಿದ ಸಭೆಯ ಮುಖ್ಯಾಂಶಗಳು:
• ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ.
• ಈಗಾಗಲೇ ಎಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ.
• ಕಾನೂನು – ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದೇವೆ.
• ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ. 10 ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು.
• ನಾವು ಪ್ರಜಾಪ್ರಭುತ್ವ ಮತ್ತು ಸಂವಾದದಲ್ಲಿ ನಂಬಿಕೆಯಿಟ್ಟಿರುವವರು. ಪ್ರತಿಭಟನೆಗೆ ಯಾವುದೇ ಅಡ್ಡಿಪಡಿಸಿಲ್ಲ. ನಾನೂ ರೈತ ಸಂಘದಲ್ಲಿದ್ದವನು, ನಮ್ಮ ವಿರುದ್ಧ ಪ್ರತಿಭಟಿಸಿದರೂ ಅದನ್ನು ಹತ್ತಿಕ್ಕುವ ಕೆಲಸ ನಾವು ಮಾಡಿಲ್ಲ.
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…