ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರೆ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆ ವಿಷಯ ಕುರಿತಂತೆ ನಡೆಸಿದ ಸಭೆಯ ಮುಖ್ಯಾಂಶಗಳು:
• ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ.
• ಈಗಾಗಲೇ ಎಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ.
• ಕಾನೂನು – ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದೇವೆ.
• ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ. 10 ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು.
• ನಾವು ಪ್ರಜಾಪ್ರಭುತ್ವ ಮತ್ತು ಸಂವಾದದಲ್ಲಿ ನಂಬಿಕೆಯಿಟ್ಟಿರುವವರು. ಪ್ರತಿಭಟನೆಗೆ ಯಾವುದೇ ಅಡ್ಡಿಪಡಿಸಿಲ್ಲ. ನಾನೂ ರೈತ ಸಂಘದಲ್ಲಿದ್ದವನು, ನಮ್ಮ ವಿರುದ್ಧ ಪ್ರತಿಭಟಿಸಿದರೂ ಅದನ್ನು ಹತ್ತಿಕ್ಕುವ ಕೆಲಸ ನಾವು ಮಾಡಿಲ್ಲ.
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…