ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರ: ಸಿಎಂ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ….

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರೆ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆ ವಿಷಯ ಕುರಿತಂತೆ ನಡೆಸಿದ ಸಭೆಯ ಮುಖ್ಯಾಂಶಗಳು:

• ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ.

• ಈಗಾಗಲೇ ಎಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ.

• ಕಾನೂನು – ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದೇವೆ.

• ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ. 10 ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು.

• ನಾವು ಪ್ರಜಾಪ್ರಭುತ್ವ ಮತ್ತು ಸಂವಾದದಲ್ಲಿ ನಂಬಿಕೆಯಿಟ್ಟಿರುವವರು. ಪ್ರತಿಭಟನೆಗೆ ಯಾವುದೇ ಅಡ್ಡಿಪಡಿಸಿಲ್ಲ. ನಾನೂ ರೈತ ಸಂಘದಲ್ಲಿದ್ದವನು, ನಮ್ಮ ವಿರುದ್ಧ ಪ್ರತಿಭಟಿಸಿದರೂ ಅದನ್ನು ಹತ್ತಿಕ್ಕುವ ಕೆಲಸ ನಾವು ಮಾಡಿಲ್ಲ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

3 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

5 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

5 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

12 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago