ದೇವನಹಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ವಿರೋಧಿ ಹೋರಾಟಗಾರರನ್ನು ಗುರುವಾರ ತಾಲ್ಲೂಕಿನಾದ್ಯಂತ ಪೊಲೀಸರು ತಡೆದಿದ್ದಾರೆ. ಈ ವೇಳೆ ರೈತ ಹೋರಾಟಗಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
‘ಕೆಲವು ರೈತ ಮುಖಂಡರನ್ನು ಗೃಹಬಂಧನದಲ್ಲಿ ಇರಿಸಿ ಪೊಲೀಸರು ಸರ್ವಾಧಿಕಾರಿಗಳಾಗಿ ವರ್ತಿಸುತ್ತಿದ್ದಾರೆ’. ಎಂದು ರೈತ ಹೋರಾಟಗಾರರು ಆರೋಪಿಸಿದ್ದಾರೆ.
ಈ ವೇಳೆ ರೈತರು ಬಾತ್ ನಲ್ಲಿ ವಿಷ ಬೆರಸಿ ಸೇವಿಸಲು ಮುಂದಾದರು. ಈ ವೇಳೆ ಪೊಲೀಸರು ರೈತರಿಂದ ವಿಷದ ಅನ್ನದ ಪಾತ್ರೆ ಕಿತ್ತು ಕೆಳಗೆ ಚೆಲ್ಲಿದರು. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ತಳ್ಳಾಟ ಉಂಟಾಯಿತು. ನಂತರ ರೈತರ ಹೋರಾಟ ವಿಕೋಪಕ್ಕೆ ತಿರುಗಿದೆ. ರೈತ ವೆಂಕಟೇಶ್ ಅನ್ನದ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅಸ್ವಸ್ಥಗೊಂಡಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…