ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟಗಾರರ ಪ್ರತಿಭಟನೆ: ಬಾತ್ ನಲ್ಲಿ ವಿಷ ಬೆರಸಿ ಸೇವಿಸಲು ಯತ್ನ:  ಅನ್ನದ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

ದೇವನಹಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ವಿರೋಧಿ ಹೋರಾಟಗಾರರನ್ನು ಗುರುವಾರ  ತಾಲ್ಲೂಕಿನಾದ್ಯಂತ ಪೊಲೀಸರು ತಡೆದಿದ್ದಾರೆ. ಈ ವೇಳೆ ರೈತ ಹೋರಾಟಗಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

‘ಕೆಲವು ರೈತ ಮುಖಂಡರನ್ನು ಗೃಹಬಂಧನದಲ್ಲಿ ಇರಿಸಿ ಪೊಲೀಸರು ಸರ್ವಾಧಿಕಾರಿಗಳಾಗಿ ವರ್ತಿಸುತ್ತಿದ್ದಾರೆ’. ಎಂದು ರೈತ ಹೋರಾಟಗಾರರು ಆರೋಪಿಸಿದ್ದಾರೆ.

ಈ ವೇಳೆ ರೈತರು ಬಾತ್ ನಲ್ಲಿ ವಿಷ ಬೆರಸಿ ಸೇವಿಸಲು ಮುಂದಾದರು. ಈ ವೇಳೆ ಪೊಲೀಸರು ರೈತರಿಂದ ವಿಷದ ಅನ್ನದ ಪಾತ್ರೆ ಕಿತ್ತು ಕೆಳಗೆ ಚೆಲ್ಲಿದರು. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ತಳ್ಳಾಟ ಉಂಟಾಯಿತು.‌ ನಂತರ ರೈತರ ಹೋರಾಟ ವಿಕೋಪಕ್ಕೆ ತಿರುಗಿದೆ. ರೈತ ವೆಂಕಟೇಶ್ ಅನ್ನದ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅಸ್ವಸ್ಥಗೊಂಡಿದ್ದಾರೆ.

Ramesh Babu

Journalist

Recent Posts

ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಲಕ್ಷ್ಮಿಪತಿ ಜಿ ಅಭಿನಂದನೆ

ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ. ಮೋಹನ್, ಶಿವಣ್ಣ…

4 hours ago

MLC Election: ಮೊದಲ ಪ್ರಾಶಸ್ತ್ಯ ಮತ

ಕರ್ನಾಟಕ ವಿಧಾನ ಸಭೆಯಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ಚುನಾವಣೆ ಫಲಿತಾಂಶ (ಮೊದಲ ಪ್ರಾಶಸ್ತ್ಯ ಮತ) INC ------- 1.…

5 hours ago

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

16 hours ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

18 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

1 day ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

1 day ago