ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಮಣಿದ ಸರ್ಕಾರ: ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ.

ಕೆಐಎಡಿಬಿಯಿಂದ 13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ವಿರೋಧಿಸಿ ರೈತರು ಸುಮಾರು 1,200ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿದ್ದರು. ರೈತರ ಹೋರಾಟಕ್ಕೆ ಮಣಿದ ಸರ್ಕಾರ  ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ.

ವಿಧಾನಸೌಧದಲ್ಲಿ ಇಂದು(ಮಂಗಳವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರ ಜೊತೆಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

1,777 ಎಕರೆ ಡಿನೋಟಿಫಿಕೇಷನ್ ಕೈಬಿಟ್ಟಿದ್ದೇವೆ. ಆದರೆ, ಭೂಮಾಲೀಕರು ಸ್ವಯಂ ಪ್ರೇರಿತರಾಗಿ ಭೂಮಿ ನೀಡಲು ಮುಂದಾದರೆ ಖರೀದಿಸುತ್ತೇವೆ. ಆದರೆ, ಬಲವಂತವಾಗಿ ಖರೀದಿಸುವುದಿಲ್ಲ ಸ್ವಯಂ ಪ್ರೇರಿತರಾಗಿ ಭೂಮಿ ನೀಡುವವರಿಗೆ ಸೂಕ್ತ ಪರಿಹಾರ ನೀಡುತ್ತೇವೆ. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು ಎಂಬುದು ನಮ್ಮ ಆಶಯವಾಗಿದೆ. ಸರ್ಕಾರದ ನಿರ್ಧಾರ ದೇವನಹಳ್ಳಿ ಪ್ರದೇಶಕ್ಕೆ ಮಾತ್ರ ಸಿಮೀತವಾಗಿದೆ ಎಂದು ಮುಖ್ಯಮಂತ್ರಿ‌ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತುಗಳು:

• ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ.

• ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದ್ದರೂ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು.

• ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.

•  ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.

• 1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸ್ವಾಧೀನಪಡಿಸಿಕೊಂಡು, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು.

• ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.

•  ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ.

•  ಯಾವುದೇ ಕಾರಣಕ್ಕೂ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

4 minutes ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

51 minutes ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

2 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

10 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago