ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಮಣಿದ ಸರ್ಕಾರ: ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ.

ಕೆಐಎಡಿಬಿಯಿಂದ 13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ವಿರೋಧಿಸಿ ರೈತರು ಸುಮಾರು 1,200ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿದ್ದರು. ರೈತರ ಹೋರಾಟಕ್ಕೆ ಮಣಿದ ಸರ್ಕಾರ  ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ.

ವಿಧಾನಸೌಧದಲ್ಲಿ ಇಂದು(ಮಂಗಳವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರ ಜೊತೆಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

1,777 ಎಕರೆ ಡಿನೋಟಿಫಿಕೇಷನ್ ಕೈಬಿಟ್ಟಿದ್ದೇವೆ. ಆದರೆ, ಭೂಮಾಲೀಕರು ಸ್ವಯಂ ಪ್ರೇರಿತರಾಗಿ ಭೂಮಿ ನೀಡಲು ಮುಂದಾದರೆ ಖರೀದಿಸುತ್ತೇವೆ. ಆದರೆ, ಬಲವಂತವಾಗಿ ಖರೀದಿಸುವುದಿಲ್ಲ ಸ್ವಯಂ ಪ್ರೇರಿತರಾಗಿ ಭೂಮಿ ನೀಡುವವರಿಗೆ ಸೂಕ್ತ ಪರಿಹಾರ ನೀಡುತ್ತೇವೆ. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು ಎಂಬುದು ನಮ್ಮ ಆಶಯವಾಗಿದೆ. ಸರ್ಕಾರದ ನಿರ್ಧಾರ ದೇವನಹಳ್ಳಿ ಪ್ರದೇಶಕ್ಕೆ ಮಾತ್ರ ಸಿಮೀತವಾಗಿದೆ ಎಂದು ಮುಖ್ಯಮಂತ್ರಿ‌ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತುಗಳು:

• ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ.

• ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದ್ದರೂ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು.

• ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.

•  ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.

• 1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸ್ವಾಧೀನಪಡಿಸಿಕೊಂಡು, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು.

• ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.

•  ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ.

•  ಯಾವುದೇ ಕಾರಣಕ್ಕೂ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

4 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

7 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

21 hours ago