ಚರ್ಮಗಂಟು ರೋಗ: ಘಾಟಿ ದನಗಳ ಜಾತ್ರೆಗೆ ನಿರ್ಬಂಧ; ಪೊಲೀಸ್ ಸುಪರ್ದಿಯಲ್ಲಿ ರಾಸುಗಳ ಎತ್ತಂಗಡಿ; ರೈತರ ಸ್ವಯಂಪ್ರೇರಿತ ದನಗಳ ಜಾತ್ರೆಗೆ ಬ್ರೇಕ್

ರಾಜ್ಯಾದ್ಯಂತ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಉಲ್ಬಣಗೊಂಡ ಹಿನ್ನೆಲೆ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿಯ ದನಗಳ ಜಾತ್ರೆಗೆ ಸೇರಿದ್ದ ಜಾನುವಾರುಗಳನ್ನು ಜಿಲ್ಲಾಡಳಿತದ ಆದೇಶದ ಮೇರೆಗೆ ವಾಪಸ್ ಕಳುಹಿಸಲಾಯಿತು.

ಪೊಲೀಸ್ ಬಿಗಿ‌ ಭದ್ರತೆಯಲ್ಲಿ ಪಶು ಇಲಾಖೆ ಅಧಿಕಾರಿಗಳು, ವೈದ್ಯರು, ತೂಬಗೆರೆ ಹೋಬಳಿ ಉಪತಹಶೀಲ್ದಾರ್, ಘಾಟಿ‌ಕ್ಷೇತ್ರದ ಸಿಬ್ಬಂದಿ ರೈತರಿಗೆ ತಿಳಿ ಹೇಳಿ ಆಟೋ ಪ್ರಚಾರ ಮಾಡಿ ರಾಸುಗಳೊಂದಿಗೆ ರೈತರನ್ನು ಹಿಂದಕ್ಕೆ ಕಳುಹಿಸಲಾಯಿತು.

ಜ.31ರವರೆಗೆ ಜಾನುವಾರು ಜಾತ್ರೆ‌ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರೂ ರೈತರು ಸ್ವಯಂಪ್ರೇರಿತವಾಗಿ ಪೆಂಡಾಲ್ ಹಾಕಿ ಜಾನುವಾರು ಕರೆತಂದಿದ್ದರು. ಕಳೆದ‌ ಮೂರು ದಿನಗಳಿಂದ ಜಾನುವಾರು ಕರೆತರದಂತೆ ಪಶು‌ ವೈದ್ಯರು, ಅಧಿಕಾರಿಗಳು ಮನವಿ ಮಾಡಿದ್ದರೂ ರೈತರು ಪಟ್ಟು ಸಡಿಲಿಸಿರಲಿಲ್ಲ. ಜಿಲ್ಲಾಡಳಿತದ ಸೌಕರ್ಯ ನಮಗೆ ಬೇಡ, ರಾಸುಗಳನ್ನು ಮಾರಾಟ ಮಾಡಲು ಅವಕಾಶ ಕೊಡಬೇಕೆಂಬುದು ರೈತರ ವಾದವಾಗಿತ್ತು.

ಮಾಧ್ಯಮದವರೊಂದಿಗೆ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಶು‌ ಇಲಾಖೆ ಉಪ ನಿರ್ದೇಶಕ ಡಾ.ಜಿ.ಎಂ.ನಾಗರಾಜ್ ಅವರು, ಗ್ರಾಮಾಂತರ ಜಿಲ್ಲೆಯಲ್ಲಿ 1 ಲಕ್ಷ 62 ಸಾವಿರ ರಾಸುಗಳಿವೆ, ಚರ್ಮಗಂಟು ರೋಗ ತಡೆಗಟ್ಟಲು ರೈತರ ಮನೆ ಮನೆಗೆ ತೆರಳಿ ರಾಸುಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ರೋಗಲಕ್ಷಣಗಳು ಕಂಡುಬಂದಲ್ಲಿ ಲಸಿಕೆ ನೀಡಲಾಗುತ್ತಿದೆ. ಚರ್ಮಗಂಟು ರೋಗದಿಂದ ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 204 ರಾಸುಗಳು ಸಾವನ್ನಪ್ಪಿವೆ. ಆದ್ದರಿಂದ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ ಈ ದನಗಳ ಜಾತ್ರೆಗೆ ಇಲಾಖೆಯಿಂದ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು.

ರೋಗ ಪೀಡಿತ ರಾಸುವಿನ ಮೇಲೆ ಕುಳಿತ ನೊಣ ಆರೋಗ್ಯಯುತ ರಾಸುವಿನ ಮೇಲೆ ಕುಳಿತರೆ ತಕ್ಷಣ ಆ ರಾಸುವಿಗೂ ಕಾಯಿಲೆ ಬರುತ್ತದೆ, ಗಾಳಿ, ನೀರು, ಮೇವು, ಸೊಳ್ಳೆಗಳಿಂದಲೂ‌ ರೋಗ ಹರಡುತ್ತದೆ. ಈಗಾಗಲೇ ಈ‌ ಜಾತ್ರೆಯಲ್ಲಿ ನಾಲ್ಕೈದು ಜೊತೆ ರಾಸುಗಳಲ್ಲಿ ಚರ್ಮಗಂಟು ರೋಗ ಕಂಡುಬಂದಿದೆ. ಇದು ಇನ್ನೂ ಹೆಚ್ಚು ಹಬ್ಬಿ ರಾಸುಗಳಿಗೆ ಬಾಧಿಸುವುದು ಬೇಡ ಎಂದು ಈ ಜಾತ್ರೆಗೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು.

ರೈತರ ಸ್ವಯಂಪ್ರೇರಿತ ದನಗಳ ಜಾತ್ರೆ ಪ್ರಾರಂಭವಾಗಿ ಮೂರ್ನಾಲ್ಕು ದಿನಗಳ ಬಳಿಕ ಇಂದು ಅಧಿಕಾರಿಗಳು ಸ್ಥಳಕ್ಕೆ ಬಂದು ಜಾಗ ಖಾಲಿ ಮಾಡುವಂತೆ ರೈತರಿಗೆ ಸೂಚಿಸಿದಾಗ ರೈತರಿಗೆ ದಿಕ್ಕು ತೋಚದಂತಾಗಿ ಪರದಾಡಿದರು. ಬೇರೆ ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ರೈತರು ರಾಸುಗಳನ್ನು ಸಾವಿರಾರು ರೂಪಾಯಿ ಖರ್ಚು ಮಾಡಿ ಕರೆತಂದಿದ್ದರು.

ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಜಾನುವಾರು ಜಾತ್ರೆ ಜ.16ರಿಂದಲೇ ರೈತರು‌ ಜಾನುವಾರು ಕರೆತರಲು ಬಿಟ್ಟು ಶುಕ್ರವಾರ ಏಕಾಏಕಿ ರೈತರನ್ನು ತೆರವು ಮಾಡಿದ‌ ಜಿಲ್ಲಾಡಳಿತದ ಕ್ರಮ ರೈತರ ಟೀಕೆಗೆ ಗುರಿಯಾಗಿದೆ. ಜಾನುವಾರು‌ ನಿಷೇಧ ಹೇರಿದ್ದ ಜಿಲ್ಲಾಡಳಿತ ಅರಂಭದಲ್ಲೇ ರಾಸುಗಳಿಗೆ ನಿರ್ಬಂಧ ಹೇರಬೇಕಿತ್ತು.‌ ಸಾವಿರಾರು ರೂಪಾಯಿ ಖರ್ಚು‌ಮಾಡಿ ದೂರದಿಂದ‌ ಬಂದ ರೈತರನ್ನು ಜಾತ್ರೆ ಮುಕ್ತಾಯಕ್ಕೆ ಎರಡು ದಿನ ಇರುವಂತೆ ವಾಪಸ್ ಕಳುಹಿಸುತ್ತಿರುವುದು‌ ಸರಿಯಲ್ಲ.‌ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರೈತರಿಗೆ‌ ಸಾವಿರಾರು ರೂಪಾಯಿ‌ ನಷ್ಟವಾಗಿದೆ. ಜೊತೆಗೆ ರೋಗವು ಹಬ್ಬುವಂತಾಗಿದೆ‌ ಎಂದು ರೈತರು ಟೀಕಿಸಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

13 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

15 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

16 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

20 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

22 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago