ಚಲಿಸುತ್ತಿದ್ದ ಕಾರು ಇದ್ದಕ್ಕಿದಂತೆ ಹೊತ್ತಿ ಉರಿದಿರುವ ಘಡನೆ ಇಂದು ಸಂಜೆ ತಾಲ್ಲೂಕಿನ ಹೊರವಲಯದ ಮಾರಸಂದ್ರ ಅಪಾರ್ಟ್ಮೆಂಟ್ ಬಳಿ ನಡೆದಿದೆ.
ಬೆಂಕಿ ಹೊತ್ತಿಕೊಂಡ ಕೂಡಲೇ ಕಾರಿನಲ್ಲಿದ್ದವರು ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಸ್ಥಳಕ್ಕೆ ಆಗಮಿಸಿದ ಆಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಗೌರಿಬಿದನೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರು ಇದ್ದಕ್ಕಿದಂತೆ ಹೊತ್ತಿ ಉರಿದಿದೆ, ಕಾರಿನ ಮೇಲೆ ಲಾಯರ್ ಸಿಂಬಲ್ ಇದ್ದು, ವಕೀಲರ ಕುಟುಂಬ ಕಾರಿನಲ್ಲಿದ್ದ ಮಾಹಿತಿ ತಿಳಿದು ಬಂದಿದೆ.
ನೋಡು ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದ್ದು, ಇಂಜಿನ್ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ನಡೆದ ಸ್ಥಳ ಬೆಂಗಳೂರು ಹಿಂದೂಪುರ ಹೆದ್ದಾರಿಯಾದ ಕಾರಣ ಸ್ಥಳದಲ್ಲಿ ಕಿ.ಮೀ ವರೆಗೂ ರಸ್ತೆ ಸಂಚಾರ ಬಂದ್ ಆಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ರಸ್ತೆ ಸಂಚಾರವನ್ನು ಸುಗಮಗೊಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…