ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಹ್ಯಾಂಡ್ ಬ್ರೇಕ್ ಸುಟ್ಟಹೋದ ಹಿನ್ನೆಲೆ ಡ್ರೈವರ್ ಇಲ್ಲದೇ ಜನರೆಡೆಗೆ ನುಗ್ಗಿದ ಕಾರು: ದಿಕ್ಕಾಪಾಲಾಗಿ ಓಡಿದ ವಾಹನ‌ ಸವಾರರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಡ್ರೈವರ್ ಕಾರಿನಿಂದ ಇಳಿದು ತನ್ನ ಪ್ರಾಣವನ್ನು ಉಳಿಸಿಕೊಂಡಿದ್ದಾನೆ. ಆದರೆ, ಕಾರು ಚಲನೆಯಲ್ಲಿತ್ತು. ಈ ಘಟನೆ ಎಲಿವೇಟೆಡ್ ರಸ್ತೆಯಲ್ಲಿ ಅಜ್ಮೀರ್‌ನಿಂದ ಸೋದಲಾಲ ಕಡೆಗೆ ಇಳಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಎಂಜಿ ಹೆಕ್ಟರ್ ಕಾರು ಬೆಂಕಿಗೆ ಆಹುತಿಯಾಗಿದೆ. ರಸ್ತೆಯಲ್ಲಿ ವಾಹನಗಳು ಚಲಿಸುತ್ತಿದ್ದವು, ಚಲಿಸುತ್ತಿದ್ದ ವಾಹನಗಳ ಮಧ್ಯೆ ಈ ಬೆಂಕಿ ಹೊತ್ತಿಕೊಂಡಿದ್ದ ಕಾರು ನುಗ್ಗಿತ್ತು. ಆಗ ವಾಹನ ಸವಾರರು ಕೆಲಕಾಲ ಭಯಪಟ್ಟು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ಬಿಟ್ಟು ಓಡಿಹೋದರು.‌ ಸುಟ್ಟು ಕರಕಲಾಗಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕೊನೆಗೆ ನಿಂತಿತು. ರಸ್ತೆಯಲ್ಲಿ ಸಂಚಾರ ದಟ್ಟಣೆ ಇದ್ದರೂ ಯಾರಿಗೂ ಗಾಯಗಳಾಗಿಲ್ಲ. ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿತ್ತು.

ಮಾನಸ ಸರೋವರದ ಪತ್ರಾಕರ್ ಕಾಲೋನಿಯಲ್ಲಿರುವ ದಿವ್ಯ ದರ್ಶನ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಜಿತೇಂದ್ರ ಜಂಗಿದ್ ಕಾರನ್ನು ಚಲಾಯಿಸುತ್ತಿದ್ದರು. ಜಿತೇಂದ್ರ ಅವರು 2021 ರಲ್ಲಿ ಕಾರನ್ನು ಖರೀದಿಸಿದರು.

ಎಲಿವೇಟೆಡ್ ರಸ್ತೆಯಿಂದ ಇಳಿಯುವಾಗ‌ ಎಸಿಯಿಂದ ಹೊಗೆ ಬರಲು ಪ್ರಾರಂಭಿಸಿತು. ನನ್ನ ಅಣ್ಣನಿಗೆ ಫೋನ್ ಮಾಡಿದಾಗ ಕಾರಿನ ಬಾನೆಟ್ ತೆರೆದು ನೋಡುವಂತೆ ಹೇಳಿದರು. ಕಾರಿನಿಂದ ಇಳಿದು ಬಾನೆಟ್ ತೆರೆದಾಗ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಜನ ಜಮಾಯಿಸಿದರು. ಕಾರಿನಲ್ಲಿ ವೈರಿಂಗ್ ಸುಟ್ಟುಹೋದಾಗ ಹ್ಯಾಂಡ್ ಬ್ರೇಕ್ ಹಾಕಲು ಆಗಲಿಲ್ಲ. ನಾಲ್ಕೂ ಕಿಟಕಿಗಳನ್ನು ತೆರೆದು ಕೆಳಗೆ ಇಳಿಯುವಷ್ಟರಲ್ಲಿ ಬಾನೆಟ್ ನಿಂದ ಬೆಂಕಿ ಹೊತ್ತಿಕೊಂಡಿತು.  ಸುತ್ತಲೂ ಜನ ಜಮಾಯಿಸಿದರು. ಅಷ್ಟರಲ್ಲಿ ಯಾರೋ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬೆಂಕಿಯ ರಭಸಕ್ಕೆ ವೈರಿಂಗ್ ಸುಟ್ಟು ಬೂದಿಯಾಗಿದ್ದು, ಕಾರಿನ ಒಂದು ಟೈರ್ ಕೂಡ ಸಿಡಿದಿದೆ ಎಂದು ಕಾರಿನ ಚಾಲಕ ತಿಳಿಸಿದ್ದಾನೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

5 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

21 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago