ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಹ್ಯಾಂಡ್ ಬ್ರೇಕ್ ಸುಟ್ಟಹೋದ ಹಿನ್ನೆಲೆ ಡ್ರೈವರ್ ಇಲ್ಲದೇ ಜನರೆಡೆಗೆ ನುಗ್ಗಿದ ಕಾರು: ದಿಕ್ಕಾಪಾಲಾಗಿ ಓಡಿದ ವಾಹನ‌ ಸವಾರರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಡ್ರೈವರ್ ಕಾರಿನಿಂದ ಇಳಿದು ತನ್ನ ಪ್ರಾಣವನ್ನು ಉಳಿಸಿಕೊಂಡಿದ್ದಾನೆ. ಆದರೆ, ಕಾರು ಚಲನೆಯಲ್ಲಿತ್ತು. ಈ ಘಟನೆ ಎಲಿವೇಟೆಡ್ ರಸ್ತೆಯಲ್ಲಿ ಅಜ್ಮೀರ್‌ನಿಂದ ಸೋದಲಾಲ ಕಡೆಗೆ ಇಳಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಎಂಜಿ ಹೆಕ್ಟರ್ ಕಾರು ಬೆಂಕಿಗೆ ಆಹುತಿಯಾಗಿದೆ. ರಸ್ತೆಯಲ್ಲಿ ವಾಹನಗಳು ಚಲಿಸುತ್ತಿದ್ದವು, ಚಲಿಸುತ್ತಿದ್ದ ವಾಹನಗಳ ಮಧ್ಯೆ ಈ ಬೆಂಕಿ ಹೊತ್ತಿಕೊಂಡಿದ್ದ ಕಾರು ನುಗ್ಗಿತ್ತು. ಆಗ ವಾಹನ ಸವಾರರು ಕೆಲಕಾಲ ಭಯಪಟ್ಟು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ಬಿಟ್ಟು ಓಡಿಹೋದರು.‌ ಸುಟ್ಟು ಕರಕಲಾಗಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕೊನೆಗೆ ನಿಂತಿತು. ರಸ್ತೆಯಲ್ಲಿ ಸಂಚಾರ ದಟ್ಟಣೆ ಇದ್ದರೂ ಯಾರಿಗೂ ಗಾಯಗಳಾಗಿಲ್ಲ. ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿತ್ತು.

ಮಾನಸ ಸರೋವರದ ಪತ್ರಾಕರ್ ಕಾಲೋನಿಯಲ್ಲಿರುವ ದಿವ್ಯ ದರ್ಶನ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಜಿತೇಂದ್ರ ಜಂಗಿದ್ ಕಾರನ್ನು ಚಲಾಯಿಸುತ್ತಿದ್ದರು. ಜಿತೇಂದ್ರ ಅವರು 2021 ರಲ್ಲಿ ಕಾರನ್ನು ಖರೀದಿಸಿದರು.

ಎಲಿವೇಟೆಡ್ ರಸ್ತೆಯಿಂದ ಇಳಿಯುವಾಗ‌ ಎಸಿಯಿಂದ ಹೊಗೆ ಬರಲು ಪ್ರಾರಂಭಿಸಿತು. ನನ್ನ ಅಣ್ಣನಿಗೆ ಫೋನ್ ಮಾಡಿದಾಗ ಕಾರಿನ ಬಾನೆಟ್ ತೆರೆದು ನೋಡುವಂತೆ ಹೇಳಿದರು. ಕಾರಿನಿಂದ ಇಳಿದು ಬಾನೆಟ್ ತೆರೆದಾಗ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಜನ ಜಮಾಯಿಸಿದರು. ಕಾರಿನಲ್ಲಿ ವೈರಿಂಗ್ ಸುಟ್ಟುಹೋದಾಗ ಹ್ಯಾಂಡ್ ಬ್ರೇಕ್ ಹಾಕಲು ಆಗಲಿಲ್ಲ. ನಾಲ್ಕೂ ಕಿಟಕಿಗಳನ್ನು ತೆರೆದು ಕೆಳಗೆ ಇಳಿಯುವಷ್ಟರಲ್ಲಿ ಬಾನೆಟ್ ನಿಂದ ಬೆಂಕಿ ಹೊತ್ತಿಕೊಂಡಿತು.  ಸುತ್ತಲೂ ಜನ ಜಮಾಯಿಸಿದರು. ಅಷ್ಟರಲ್ಲಿ ಯಾರೋ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬೆಂಕಿಯ ರಭಸಕ್ಕೆ ವೈರಿಂಗ್ ಸುಟ್ಟು ಬೂದಿಯಾಗಿದ್ದು, ಕಾರಿನ ಒಂದು ಟೈರ್ ಕೂಡ ಸಿಡಿದಿದೆ ಎಂದು ಕಾರಿನ ಚಾಲಕ ತಿಳಿಸಿದ್ದಾನೆ.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

4 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

5 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

5 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

7 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

10 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

11 hours ago