ಚಲಿಸುವ ಗೂಡ್ಸ್ ರೈಲಿಗೆ ಹತ್ತಲು ಹೋಗಿ ಯುವಕನೋರ್ವ ಯಡವಟ್ಟು ಮಾಡಿಕೊಂಡಿದ್ದಾನೆ. ರೈಲಿಗೆ ಹತ್ತಲು ಹೋಗಿ ಆಯಾತಪ್ಪಿ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ಕೂಡಲೇ ರೈಲಿನ ಚಕ್ರಕ್ಕೆ ಕಾಲಿನ ಪಾದ ಸಿಲುಕಿದೆ. ಈ ಹಿನ್ನೆಲೆ ಕಾಲಿನ ಪಾದ ನುಜ್ಜುಗುಜ್ಜಾಗಿದೆ.
ದೊಡ್ಡಬಳ್ಳಾಪುರ ಮೂಲದ ಹೇಮಂತ್ ಕುಮಾರ್ (28) ಯಡವಟ್ಟು ಮಾಡಿಕೊಂಡ ಯುವಕ.
ಕತ್ತಲಲ್ಲಿ ಹಳಿ ದಾಟಲು ಹೋಗಿದ್ದಾನೆ. ಹಳಿಯಲ್ಲಿ ಗೂಡ್ಸ್ ರೈಲು ನಿಂತಿತ್ತು. ಈ ಯುವಕ ದುರಾದೃಷ್ಟವಷಾತ್ ಗೂಡ್ಸ್ ರೈಲು ಹತ್ತಿದಾಗ ರೈಲು ಮುಂದಕ್ಕೆ ಚಲಿಸಿದೆ. ತಕ್ಷಣ ಈ ಯುವಕ ಕೆಳಗೆ ಬಿದ್ದಿದ್ದಾನೆ. ಆಗ ಕಾಲು ರೈಲಿಗೆ ಸಿಲುಕಿದೆ ಎಂದು ತಿಳಿದುಬಂದಿದೆ.
ಘಟನೆ ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಇಂದು ಮುಂಜಾನೆ ಸುಮಾರು 3 ಗಂಟೆಯಲ್ಲಿ ನಡೆದಿದೆ. ವಿಚಾರ ತಿಳಿದ ರೈಲ್ವೆ ಸಿಬ್ಬಂದಿ ಹಾಗೂ ರೈಲ್ವೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಗಾಯಾಳನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.
ರೈಲ್ವೆ ಅಧಿಕಾರಿಗಳಿಂದ ತನಿಖೆ ಮುಂದುವರಿದಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…