ಚಲಿಸುವ ಗೂಡ್ಸ್ ರೈಲಿಗೆ ಹತ್ತಲು ಹೋಗಿ ಯುವಕನೋರ್ವ ಯಡವಟ್ಟು ಮಾಡಿಕೊಂಡಿದ್ದಾನೆ. ರೈಲಿಗೆ ಹತ್ತಲು ಹೋಗಿ ಆಯಾತಪ್ಪಿ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ಕೂಡಲೇ ರೈಲಿನ ಚಕ್ರಕ್ಕೆ ಕಾಲಿನ ಪಾದ ಸಿಲುಕಿದೆ. ಈ ಹಿನ್ನೆಲೆ ಕಾಲಿನ ಪಾದ ನುಜ್ಜುಗುಜ್ಜಾಗಿದೆ.
ದೊಡ್ಡಬಳ್ಳಾಪುರ ಮೂಲದ ಹೇಮಂತ್ ಕುಮಾರ್ (28) ಯಡವಟ್ಟು ಮಾಡಿಕೊಂಡ ಯುವಕ.
ಕತ್ತಲಲ್ಲಿ ಹಳಿ ದಾಟಲು ಹೋಗಿದ್ದಾನೆ. ಹಳಿಯಲ್ಲಿ ಗೂಡ್ಸ್ ರೈಲು ನಿಂತಿತ್ತು. ಈ ಯುವಕ ದುರಾದೃಷ್ಟವಷಾತ್ ಗೂಡ್ಸ್ ರೈಲು ಹತ್ತಿದಾಗ ರೈಲು ಮುಂದಕ್ಕೆ ಚಲಿಸಿದೆ. ತಕ್ಷಣ ಈ ಯುವಕ ಕೆಳಗೆ ಬಿದ್ದಿದ್ದಾನೆ. ಆಗ ಕಾಲು ರೈಲಿಗೆ ಸಿಲುಕಿದೆ ಎಂದು ತಿಳಿದುಬಂದಿದೆ.
ಘಟನೆ ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಇಂದು ಮುಂಜಾನೆ ಸುಮಾರು 3 ಗಂಟೆಯಲ್ಲಿ ನಡೆದಿದೆ. ವಿಚಾರ ತಿಳಿದ ರೈಲ್ವೆ ಸಿಬ್ಬಂದಿ ಹಾಗೂ ರೈಲ್ವೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಗಾಯಾಳನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.
ರೈಲ್ವೆ ಅಧಿಕಾರಿಗಳಿಂದ ತನಿಖೆ ಮುಂದುವರಿದಿದೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…