ಬೆಂಗಳೂರು , ವೈಟ್ ಫೀಲ್ದ್ – ಚಳಿಗಾಲವನ್ನು ಆರಾಮದಾಯಕ ಋತುವೆಂದು ಭಾವಿಸಿದರೂ, ವೈದ್ಯರ ಪ್ರಕಾರ ಚಳಿಯ ವಾತಾವರಣವು ಯಾವುದೇ ಸ್ಪಷ್ಟ ಲಕ್ಷಣಗಳಿಲ್ಲದೆ ಚರ್ಮಕ್ಕೆ ಮೌನವಾಗಿ ಹಾನಿ ಉಂಟುಮಾಡಬಹುದು. ಈ ಸಮಸ್ಯೆಗಳು ನಿಧಾನವಾಗಿ ಜಾಸ್ತಿಯಾಗುತ್ತಾ, ಗಂಭೀರ ಹಂತಕ್ಕೆ ಬಂದಾದ ಮಾತ್ರ ಗಮನಕ್ಕೆ ಬರುತ್ತವೆ.
ಮೆಡಿಕವರ್ ಆಸ್ಪತ್ರೆಯ ಚರ್ಮರೋಗ ತಜ್ಞೆ ಡಾ. ರಜಿತಾ ಅಲ್ಲೂರಿ ಅವರ ಪ್ರಕಾರ, ಕಡಿಮೆ ತೇವಾಂಶ , ತಂಪಾದ ಗಾಳಿ, ಹೆಚ್ಚು ಬಿಸಿ ನೀರಿನ ಸ್ನಾನ, ರೂಮ್ ಹೀಟರ್ ಮತ್ತು ಏರ್ ಕಂಡೀಷನರ್ ಬಳಕೆಯಿಂದ ಚರ್ಮದ ಸ್ವಾಭಾವಿಕ ರಕ್ಷಣಾ ಪದರವನ್ನು ದುರ್ಬಲಗೊಳಿಸುತ್ತವೆ. “ಸ್ವಲ್ಪ ಕಡಿತಾ , ಚರ್ಮದ ಬಿಳಿಚಿಕೊಳ್ಳುವುದು ಸಾಮಾನ್ಯವೆಂದು ನಿರ್ಲಕ್ಷಿಸಿದರೆ, ಇದು ಎಕ್ಸಿಮಾ, ಡರ್ಮಟೈಟಿಸ್, ಚರ್ಮದ ಸೋಂಕುಗಳು ಮತ್ತು ಬಿರುಕುಗಳಿಗೆ ಕಾರಣವಾಗಬಹುದು,” ಎಂದು ಅವರು ಎಚ್ಚರಿಸುತ್ತಾರೆ.
ವೈದ್ಯರ ಪ್ರಕಾರ, ಚಳಿಗಾಲದಲ್ಲಿ ವಯಸ್ಕರಿಗಿಂತ ಮಕ್ಕಳ ಚರ್ಮ ಹೆಚ್ಚು ವೇಗವಾಗಿ ಹಾನಿಗೊಳಗಾಗುತ್ತದೆ. ಮಕ್ಕಳ ತಜ್ಞೆ ಡಾ. ಲಿನತಾ ರೆಡ್ಡಿ ಅವರ ಪ್ರಕಾರ, ಮಕ್ಕಳ ಚರ್ಮದ ರಕ್ಷಣಾ ಪದರ ತೆಳುವಾಗಿದ್ದು, ಬೇಗ ತೇವಾಂಶ ಕಳೆದುಕೊಳ್ಳುತ್ತದೆ. “ಮಕ್ಕಳಲ್ಲಿ ಚರ್ಮ ಒಣಗುವುದು ಸಹಜವೆಂದು ಪೋಷಕರು ತಡ ಮಾಡುತ್ತಾರೆ. ಆದರೆ ಚಿಕಿತ್ಸೆ ಇಲ್ಲದೆ ಬಿಟ್ಟರೆ ಇದು ಸೋಂಕುಗಳು, ತುಟಿಗಳ ಬಿರುಕುಗಳು ಮತ್ತು ಅಲರ್ಜಿಕ್ ಸಮಸ್ಯೆಗಳ ತೀವ್ರತೆಗೆ ಕಾರಣವಾಗಬಹುದು,” ಎಂದು ಅವರು ತಿಳಿಸಿದ್ದಾರೆ.
ಶಾಲೆಗೆ ಹೋಗುವ ಮಕ್ಕಳು ತಂಪಾದ ವಾತಾವರಣ, ಡ್ರೈ ತರಗತಿಗಳು, ಪದೇಪದೇ ಕೈ ತೊಳೆಯುವುದು ಹಾಗೂ ತೀವ್ರ ಸಾಬೂನು-ಸ್ಯಾನಿಟೈಸರ್ ಬಳಕೆ ಕಾರಣದಿಂದ ಹೆಚ್ಚಿನ ಅಪಾಯದಲ್ಲಿರುತ್ತಾರೆ. ಶಿಶುಗಳು ಮತ್ತು ಪುಟ್ಟ ಮಕ್ಕಳು ಇನ್ನಷ್ಟು ಸಂವೇದನಾಶೀಲರಾಗಿರುತ್ತಾರೆ.
ವೈದ್ಯರು ನಿಯಮಿತ ಮಾಯಿಶ್ಚರೈಸರ್ ಬಳಕೆ, ಬಿಸಿ ನೀರಿನ ಸ್ನಾನವನ್ನು ನಿಯಂತ್ರಿಸುವುದು, ಮೃದುವಾದ ಕ್ಲೆನ್ಸರ್, ಸಾಕಷ್ಟು ನೀರು ಸೇವನೆ ಮತ್ತು ಆರಂಭದಲ್ಲೇ ವೈದ್ಯರ ಸಲಹೆ ಪಡೆಯುವುದು ಅಗತ್ಯವೆಂದು ಸಲಹೆ ನೀಡುತ್ತಾರೆ.
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…
ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…
ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…
ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…