ಚಳಿಗಾಲದಲ್ಲಿ ಮೌನ ಚರ್ಮ ಹಾನಿ: ವಯಸ್ಕರಿಗಿಂತ ಮಕ್ಕಳಿಗೆ ಹೆಚ್ಚು ಅಪಾಯ – ವೈದ್ಯರ ಎಚ್ಚರಿಕೆ

ಬೆಂಗಳೂರು , ವೈಟ್‌ ಫೀಲ್ದ್‌ – ಚಳಿಗಾಲವನ್ನು ಆರಾಮದಾಯಕ ಋತುವೆಂದು ಭಾವಿಸಿದರೂ, ವೈದ್ಯರ ಪ್ರಕಾರ ಚಳಿಯ ವಾತಾವರಣವು ಯಾವುದೇ ಸ್ಪಷ್ಟ ಲಕ್ಷಣಗಳಿಲ್ಲದೆ ಚರ್ಮಕ್ಕೆ ಮೌನವಾಗಿ ಹಾನಿ ಉಂಟುಮಾಡಬಹುದು. ಈ ಸಮಸ್ಯೆಗಳು ನಿಧಾನವಾಗಿ ಜಾಸ್ತಿಯಾಗುತ್ತಾ, ಗಂಭೀರ ಹಂತಕ್ಕೆ ಬಂದಾದ ಮಾತ್ರ ಗಮನಕ್ಕೆ ಬರುತ್ತವೆ.

ಮೆಡಿಕವರ್ ಆಸ್ಪತ್ರೆಯ ಚರ್ಮರೋಗ ತಜ್ಞೆ ಡಾ. ರಜಿತಾ ಅಲ್ಲೂರಿ ಅವರ ಪ್ರಕಾರ, ಕಡಿಮೆ ತೇವಾಂಶ , ತಂಪಾದ ಗಾಳಿ, ಹೆಚ್ಚು ಬಿಸಿ ನೀರಿನ ಸ್ನಾನ, ರೂಮ್ ಹೀಟರ್ ಮತ್ತು ಏರ್ ಕಂಡೀಷನರ್ ಬಳಕೆಯಿಂದ ಚರ್ಮದ ಸ್ವಾಭಾವಿಕ ರಕ್ಷಣಾ ಪದರವನ್ನು ದುರ್ಬಲಗೊಳಿಸುತ್ತವೆ. “ಸ್ವಲ್ಪ ಕಡಿತಾ , ಚರ್ಮದ ಬಿಳಿಚಿಕೊಳ್ಳುವುದು ಸಾಮಾನ್ಯವೆಂದು ನಿರ್ಲಕ್ಷಿಸಿದರೆ, ಇದು ಎಕ್ಸಿಮಾ, ಡರ್ಮಟೈಟಿಸ್, ಚರ್ಮದ ಸೋಂಕುಗಳು ಮತ್ತು ಬಿರುಕುಗಳಿಗೆ ಕಾರಣವಾಗಬಹುದು,” ಎಂದು ಅವರು ಎಚ್ಚರಿಸುತ್ತಾರೆ.

ವೈದ್ಯರ ಪ್ರಕಾರ, ಚಳಿಗಾಲದಲ್ಲಿ ವಯಸ್ಕರಿಗಿಂತ ಮಕ್ಕಳ ಚರ್ಮ ಹೆಚ್ಚು ವೇಗವಾಗಿ ಹಾನಿಗೊಳಗಾಗುತ್ತದೆ. ಮಕ್ಕಳ ತಜ್ಞೆ ಡಾ. ಲಿನತಾ ರೆಡ್ಡಿ ಅವರ ಪ್ರಕಾರ, ಮಕ್ಕಳ ಚರ್ಮದ ರಕ್ಷಣಾ ಪದರ ತೆಳುವಾಗಿದ್ದು, ಬೇಗ ತೇವಾಂಶ ಕಳೆದುಕೊಳ್ಳುತ್ತದೆ. “ಮಕ್ಕಳಲ್ಲಿ ಚರ್ಮ ಒಣಗುವುದು ಸಹಜವೆಂದು ಪೋಷಕರು ತಡ ಮಾಡುತ್ತಾರೆ. ಆದರೆ ಚಿಕಿತ್ಸೆ ಇಲ್ಲದೆ ಬಿಟ್ಟರೆ ಇದು ಸೋಂಕುಗಳು, ತುಟಿಗಳ ಬಿರುಕುಗಳು ಮತ್ತು ಅಲರ್ಜಿಕ್ ಸಮಸ್ಯೆಗಳ ತೀವ್ರತೆಗೆ ಕಾರಣವಾಗಬಹುದು,” ಎಂದು ಅವರು ತಿಳಿಸಿದ್ದಾರೆ.

ಶಾಲೆಗೆ ಹೋಗುವ ಮಕ್ಕಳು ತಂಪಾದ ವಾತಾವರಣ, ಡ್ರೈ ತರಗತಿಗಳು, ಪದೇಪದೇ ಕೈ ತೊಳೆಯುವುದು ಹಾಗೂ ತೀವ್ರ ಸಾಬೂನು-ಸ್ಯಾನಿಟೈಸರ್ ಬಳಕೆ ಕಾರಣದಿಂದ ಹೆಚ್ಚಿನ ಅಪಾಯದಲ್ಲಿರುತ್ತಾರೆ. ಶಿಶುಗಳು ಮತ್ತು ಪುಟ್ಟ ಮಕ್ಕಳು ಇನ್ನಷ್ಟು ಸಂವೇದನಾಶೀಲರಾಗಿರುತ್ತಾರೆ.

ವೈದ್ಯರು ನಿಯಮಿತ ಮಾಯಿಶ್ಚರೈಸರ್ ಬಳಕೆ, ಬಿಸಿ ನೀರಿನ ಸ್ನಾನವನ್ನು ನಿಯಂತ್ರಿಸುವುದು, ಮೃದುವಾದ ಕ್ಲೆನ್ಸರ್, ಸಾಕಷ್ಟು ನೀರು ಸೇವನೆ ಮತ್ತು ಆರಂಭದಲ್ಲೇ ವೈದ್ಯರ ಸಲಹೆ ಪಡೆಯುವುದು ಅಗತ್ಯವೆಂದು ಸಲಹೆ ನೀಡುತ್ತಾರೆ.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

5 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

8 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

13 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

14 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

14 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

16 hours ago