ಬೆಂಗಳೂರು: ಚಳಿಗಾಲದಲ್ಲಿ ಸ್ಟ್ರೋಕ್ (ಮೆದುಳಿನ ಘಾತ) ಪ್ರಕರಣಗಳು ಹೆಚ್ಚಾಗುತ್ತಿರುವುದು ಗಮನಕ್ಕೆ ಬಂದಿದ್ದು, ವಿಶೇಷವಾಗಿ ವೃದ್ಧರು ಹಾಗೂ ರಕ್ತದೊತ್ತಡ, ಮಧುಮೇಹ ಮತ್ತು ಹೃದಯ ರೋಗ ಹೊಂದಿರುವವರಲ್ಲಿ ಅಪಾಯ ಹೆಚ್ಚಾಗಿದೆ ಎಂದು ಮೆಡಿಕವರ್ ಆಸ್ಪತ್ರೆಗಳ ವೈದ್ಯರು ಎಚ್ಚರಿಸಿದ್ದಾರೆ.
ಮೆಡಿಕವರ್ ಆಸ್ಪತ್ರೆಗಳ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ (ER Head) ಡಾ. ಕುಶಾಲ್ ಅವರು ಮಾತನಾಡಿ, “ಚಳಿಗಾಲದಲ್ಲಿ ರಕ್ತನಾಳಗಳು ಕುಗ್ಗುವುದರಿಂದ ರಕ್ತದೊತ್ತಡ ಏರಿಕೆಯಾಗುತ್ತದೆ. ಇದರಿಂದ ಸ್ಟ್ರೋಕ್ ಸಂಭವಿಸುವ ಸಾಧ್ಯತೆ ಹೆಚ್ಚಾಗುತ್ತದೆ. ಈ ಸಮಯದಲ್ಲಿ ತುರ್ತು ವಿಭಾಗಕ್ಕೆ ಸ್ಟ್ರೋಕ್ ಲಕ್ಷಣಗಳೊಂದಿಗೆ ಹೆಚ್ಚಿನ ರೋಗಿಗಳು ಬರುತ್ತಿದ್ದಾರೆ” ಎಂದು ಹೇಳಿದರು.
ಐಸಿಯು ವಿಭಾಗದ ಮುಖ್ಯಸ್ಥರಾದ ಡಾ. ನಿತ್ಯಾ ಅವರು, “ಚಳಿಗಾಲದಲ್ಲಿ ಜನರು ಕಡಿಮೆ ನೀರು ಕುಡಿಯುವುದರಿಂದ ರಕ್ತ ಗಟ್ಟಿಯಾಗುತ್ತದೆ. ಜೊತೆಗೆ ಜ್ವರ, ಉಸಿರಾಟದ ಸೋಂಕುಗಳು ದೇಹದಲ್ಲಿ ಉರಿಯೂತವನ್ನು ಹೆಚ್ಚಿಸಿ, ರಕ್ತಗುಡ್ಡೆ (ಕ್ಲಾಟ್) ಉಂಟಾಗುವ ಅಪಾಯವನ್ನು ಹೆಚ್ಚಿಸುತ್ತವೆ” ಎಂದು ವಿವರಿಸಿದರು.
ಮೆಡಿಕವರ್ ಆಸ್ಪತ್ರೆಗಳ ಆಸ್ಪತ್ರೆ ಮುಖ್ಯಸ್ಥರಾದ ಕೃಷ್ಣಮೂರ್ತಿ ಅವರು ಮಾತನಾಡಿ, “ಸ್ಟ್ರೋಕ್ ಒಂದು ತುರ್ತು ವೈದ್ಯಕೀಯ ಸ್ಥಿತಿ. ಗೋಲ್ಡನ್ ಅವರ್ ಒಳಗೆ ಆಸ್ಪತ್ರೆಗೆ ತಲುಪಿದರೆ ಜೀವ ಉಳಿಸುವುದರ ಜೊತೆಗೆ ಶಾಶ್ವತ ಅಂಗವಿಕಲತೆಯನ್ನು ಕಡಿಮೆ ಮಾಡಬಹುದು. ಸಾರ್ವಜನಿಕ ಜಾಗೃತಿ ಮತ್ತು ತಕ್ಷಣದ ಚಿಕಿತ್ಸೆ ಅತ್ಯಂತ ಅಗತ್ಯ” ಎಂದು ತಿಳಿಸಿದರು.
ವೈದ್ಯರು ಚಳಿಗಾಲದಲ್ಲಿ ರಕ್ತದೊತ್ತಡವನ್ನು ನಿಯಮಿತವಾಗಿ ಪರೀಕ್ಷಿಸಬೇಕು, ಸಾಕಷ್ಟು ನೀರು ಕುಡಿಯಬೇಕು, ತೀವ್ರ ಚಳಿಗೆ ನೇರವಾಗಿ ಒಳಗಾಗುವುದನ್ನು ತಪ್ಪಿಸಬೇಕು, ವೈದ್ಯರು ನೀಡಿದ ಔಷಧಿಗಳನ್ನು ನಿಯಮಿತವಾಗಿ ಸೇವಿಸಬೇಕು ಹಾಗೂ ಮುಖ ವಕ್ರವಾಗುವುದು, ಕೈ ಅಥವಾ ಕಾಲು ದುರ್ಬಲವಾಗುವುದು, ಮಾತು ತೊಂದರೆ, ದೃಷ್ಟಿ ಹಠಾತ್ ಕಡಿಮೆಯಾಗುವುದು ಮುಂತಾದ ಲಕ್ಷಣಗಳು ಕಂಡುಬಂದರೆ ತಕ್ಷಣ ಆಸ್ಪತ್ರೆಗೆ ಹೋಗಬೇಕು ಎಂದು ಸಲಹೆ ನೀಡಿದರು.
ಸ್ಟ್ರೋಕ್ ಸಹಾಯವಾಣಿ ಸಂಖ್ಯೆ: ಸ್ಟ್ರೋಕ್ ಸಂಬಂಧಿತ ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ಸಂಪರ್ಕಿಸಲು ವಿಶೇಷ ಸ್ಟ್ರೋಕ್ ಸಹಾಯವಾಣಿ ಸಂಖ್ಯೆ 8867026161 ಅನ್ನು ಸಂಪರ್ಕಿಸಬಹುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…