ಚಳಿಗಾಲದ ಪಾರ್ಟಿಗಳಿಂದ ಹೊಟ್ಟೆಗೆ ಕಾಟ: ಗ್ಯಾಸ್ಟ್ರೋ ಪ್ರಕರಣಗಳಲ್ಲಿ 25% ಏರಿಕೆ

ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು ತುರ್ತು ಚಿಕಿತ್ಸಾ ಪ್ರಕರಣಗಳಲ್ಲಿ ಸುಮಾರು 20–25% ಏರಿಕೆ ಕಾಣಿಸುತ್ತಿದೆ. ವಿಶೇಷವಾಗಿ ಡಿಸೆಂಬರ್‌ನಿಂದ ಜನವರಿ ಮಧ್ಯವರೆಗೂ ಈ ಪ್ರವೃತ್ತಿ ಹೆಚ್ಚಾಗುತ್ತದೆ. ವೈದ್ಯರು ಈ ಸ್ಥಿತಿಯನ್ನು “ವಿಂಟರ್ ಪಾರ್ಟಿ ಸಿಂಡ್ರೋಮ್” ಎಂದು ಕರೆಯುತ್ತಾರೆ.

ಕರ್ನಾಟಕದ ಒಳಾಂಗಣ ಅಂಕಿಅಂಶಗಳ ಪ್ರಕಾರ, 18 ರಿಂದ 45 ವರ್ಷದ ವಯೋಮಾನದವರು ಆಸಿಡಿಟಿ, ಗ್ಯಾಸ್ಟ್ರೈಟಿಸ್ ಮತ್ತು ಆಸಿಡ್ ರಿಫ್ಲಕ್ಸ್ ಪ್ರಕರಣಗಳಲ್ಲಿ ಸುಮಾರು 60% ಪಾಲು ಹೊಂದಿದ್ದಾರೆ. ಇದರಲ್ಲಿ 55% ಪುರುಷರು ಮತ್ತು 45% ಮಹಿಳೆಯರು ಇದ್ದಾರೆ.
ರಾತ್ರಿ ತಡವಾಗಿ ಅತಿ ಹೆಚ್ಚು ಆಹಾರ ಸೇವಿಸೋದು ,ಎಣ್ಣೆಯುಕ್ತ ಅಥವಾ ಸಕ್ಕರೆಯುಕ್ತ ಆಹಾರ ಸೇವಿಸುವುದು ಮುಂದಿನ ದಿನ ತೀವ್ರವಾದ ಹೊಟ್ಟೆ ನೋವು, ಆಸಿಡಿಟಿ ಮತ್ತು ಹೊಟ್ಟೆ ಉಬ್ಬುವಿಕೆಯಾಗಿ ಪರಿಣಮಿಸುತ್ತಿದೆ.

ಇನ್ನೊಂದು ಗಂಭೀರ ಸಮಸ್ಯೆ ಎಂದರೆ ಮದ್ಯಪಾನದಿಂದ ಉಂಟಾಗುವ ಪ್ಯಾಂಕ್ರಿಯಾಟೈಟಿಸ್ (ಮೇದೋಜೀರಕ ಗ್ರಂಥಿಯ ಉರಿಯೂತ ). ವರ್ಷದ ಕೊನೆಯಲ್ಲಿ ನಡೆಯುವ ಪಾರ್ಟಿಗಳ ವೇಳೆ ಕಂಡುಬರುವ ಒಟ್ಟು ತೀವ್ರ ಪ್ಯಾಂಕ್ರಿಯಾಟೈಟಿಸ್ ಪ್ರಕರಣಗಳಲ್ಲಿ ಸುಮಾರು 30% ಮದ್ಯಪಾನದಿಂದ ಉಂಟಾಗುತ್ತಿದೆ. ಒಂದೇ ಬಾರಿ ಅತಿಯಾಗಿ ಮದ್ಯ ಸೇವಿಸಿದರೂ (ಮೇದೋಜೀರಕ ಗ್ರಂಥಿಗೆ ತೀವ್ರ ಹಾನಿ ಉಂಟಾಗಬಹುದು—ವಿಶೇಷವಾಗಿ ಫ್ಯಾಟಿ ಲಿವರ್, ಪಿತ್ತಕೋಶದಲ್ಲಿ ಕಲ್ಲು ಅಥವಾ ಹಿಂದಿನ ಪ್ಯಾಂಕ್ರಿಯಾಟೈಟಿಸ್ ಇತಿಹಾಸವಿರುವವರಲ್ಲಿ. ಇಂತಹ ರೋಗಿಗಳಿಗೆ ಹೊಟ್ಟೆಯಿಂದ ಬೆನ್ನಿನವರೆಗೂ ಹರಡುವ ತೀವ್ರ ನೋವು, ವಾಂತಿ ಮತ್ತು ಊಟ ಮಾಡಲು ಆಗದ ಸ್ಥಿತಿ ಕಾಣಿಸುತ್ತದೆ.

ಚಳಿಗಾಲದಲ್ಲಿ ಜೀರ್ಣಕ್ರಿಯೆ ನಿಧಾನಗೊಳ್ಳುತ್ತದೆ. ಗ್ಯಾಸ್ಟ್ರಿಕ್ ಚಲನೆಯು ಸುಮಾರು 15% ಕಡಿಮೆಯಾಗುತ್ತದೆ, ಇದರಿಂದ ಹೊಟ್ಟೆ ಭಾರವಾಗಿರುವ ಅನುಭವ ಉಂಟಾಗುತ್ತದೆ. ಇದರೊಂದಿಗೆ, ಚಳಿಗಾಲದಲ್ಲಿ ವೈರಲ್ ಸೋಂಕುಗಳ ಅಪಾಯವೂ ಹೆಚ್ಚಾಗುತ್ತದೆ, ಇದರಿಂದ ಅತಿಸಾರ, ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಳ್ಳಬಹುದು.

ವೈದ್ಯರ ಸಲಹೆ

ಮೆಡಿಕವರ್ ಆಸ್ಪತ್ರೆಯ ವೈದ್ಯರು ಸರಳ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಸಲಹೆ ನೀಡುತ್ತಾರೆ—
· ಕಡಿಮೆ ಪ್ರಮಾಣದಲ್ಲಿ ಊಟ ಮಾಡುವುದು
· ಮದ್ಯವನ್ನು ಸಕ್ಕರೆಯುಕ್ತ ಪಾನೀಯಗಳೊಂದಿಗೆ ಮಿಶ್ರಣ ಮಾಡದಿರುವುದು
· ಸಾಕಷ್ಟು ನೀರು ಕುಡಿಯುವುದು
· ಊಟ ಮತ್ತು ನಿದ್ರೆಯ ನಡುವೆ ಕನಿಷ್ಠ 2 ಗಂಟೆಗಳ ಅಂತರ ಇಡುವುದು
ಜೀರ್ಣಾಂಗ ಸಮಸ್ಯೆಗಳ ಇತಿಹಾಸವಿರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ವೈದ್ಯರ ಅಭಿಪ್ರಾಯ

“ಈ ಚಳಿಗಾಲದಲ್ಲಿ ನಾವು ಕಾಣುತ್ತಿರುವ ಹೆಚ್ಚಿನ ಪ್ರಕರಣಗಳು 20–40 ವಯೋಮಾನದವರಲ್ಲಿ ಕಂಡುಬರುತ್ತಿವೆ. ಸರಿಯಾದ ಸಮಯಕ್ಕೆ ಊಟ ಮಾಡದೇ ಇರುವುದು ಮತ್ತು ರಾತ್ರಿ ತಡವಾಗಿ ನಡೆಯುವ ಪಾರ್ಟಿಗಳು ಇದಕ್ಕೆ ಪ್ರಮುಖ ಕಾರಣ. ಊಟದ ಸಮಯವನ್ನು 2–3 ಗಂಟೆಗಳಷ್ಟು ಮುಂದೂಡುವುದರಿಂದ ದೇಹಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೆ ಆಸಿಡಿಟಿ ಮತ್ತು ಹೊಟ್ಟೆ ಉಬ್ಬುವಿಕೆ ಉಂಟಾಗುತ್ತದೆ. ಸಕ್ಕರೆಯುಕ್ತ ಪಾನೀಯಗಳೊಂದಿಗೆ ಮದ್ಯ ಸೇವಿಸುವುದು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಯುವ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ನಿದ್ರೆ, ನೀರಿನ ಸೇವನೆ ಮತ್ತು ಆಹಾರದ ಬಗ್ಗೆ ಹೆಚ್ಚು ಜಾಗರೂಕರಾಗಬೇಕು ಎಂದು ಡಾ. ಸಾಗರ್ ಜಿ, ಕನ್ಸಲ್ಟಂಟ್ ಮೆಡಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್, ಮೆಡಿಕವರ್ ಆಸ್ಪತ್ರೆಗಳು, ಬೆಂಗಳೂರು ಹೇಳಿದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

3 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago