ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಶ್ರೀನಿವಾಸ ಪ್ರಸಾದ್(76) ನಿಧನ

ಕೇಂದ್ರ ಹಾಗು ರಾಜ್ಯ ಸಚಿವರಾಗಿ, ಆರು ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ ಸುಮಾರು ಐದು ದಶಕಗಳ ಸುದೀರ್ಘ ಸಾರ್ವಜನಿಕ ಜೀವನ ನಡೆಸಿದ 76 ವರ್ಷದ ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಸದರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಅಗಲಿದ್ದಾರೆ.

ಶ್ರೀನಿವಾಸ ಪ್ರಸಾದ್ ಅವರ ಅಗಲಿಕೆಗೆ ಹಿರಿಯ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ಶ್ರೀ ವಿ ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು.

ಪ್ರಸ್ತುತ ಕಾಲಮಾನದಲ್ಲಿ ಮಾನ್ಯ ಪ್ರಸಾದರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಸಂತಾಪ ಸೂಚಿಸಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

12 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

14 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

15 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

19 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

20 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago