ಕೇಂದ್ರ ಹಾಗು ರಾಜ್ಯ ಸಚಿವರಾಗಿ, ಆರು ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ ಸುಮಾರು ಐದು ದಶಕಗಳ ಸುದೀರ್ಘ ಸಾರ್ವಜನಿಕ ಜೀವನ ನಡೆಸಿದ 76 ವರ್ಷದ ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಸದರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಅಗಲಿದ್ದಾರೆ.
ಶ್ರೀನಿವಾಸ ಪ್ರಸಾದ್ ಅವರ ಅಗಲಿಕೆಗೆ ಹಿರಿಯ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.
ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ಶ್ರೀ ವಿ ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು.
ಪ್ರಸ್ತುತ ಕಾಲಮಾನದಲ್ಲಿ ಮಾನ್ಯ ಪ್ರಸಾದರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಸಂತಾಪ ಸೂಚಿಸಿದ್ದಾರೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…