Categories: ವಿಜಯನಗರ

ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿರುವ ಘಟನೆ ಅತ್ಯಂತ ಅಮಾನವೀಯ-ತಪ್ಪಿತಸ್ಥರನ್ನು ಪತ್ತೆಹಚ್ಚಿ ಖಂಡಿತಾ ಶಿಕ್ಷೆಗೆ ಒಳಪಡಿಸಲಾಗುವುದು- ಸಿಎಂ ಸಿದ್ದರಾಮಯ್ಯ

ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿರುವ ಘಟನೆ ಅತ್ಯಂತ ಅಮಾನವೀಯ. ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆಹಚ್ಚಿ ಖಂಡಿತಾ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈವರೆಗೆ ಕೃತ್ಯ ಎಸಗಿದವರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರಿಗೆ ತಪ್ಪಿತಸ್ಥರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ. ಕಾನೂನು ತನ್ನ ಕಾರ್ಯ ಮಾಡುತ್ತಿರುವ ಹೊರತಾಗಿಯೂ ಹಿಂದೂ ಸಂಘಟನೆಗಳ ಪ್ರತಿಭಟನೆ ಮಾಡುತ್ತಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯ ಬಗ್ಗೆ ಪರ – ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

16 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

19 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

19 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago