ಚಾರಣಿಗರ ಸುರಕ್ಷಿತ ರಕ್ಷಣೆ ಮತ್ತು ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಹ್ರಾಡೋನ್ ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದರು.

ಮೃತರ ಸಂಖ್ಯೆ 9ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎನ್ನುವ ಸೂಚನೆಗಳನ್ನು ಸಚಿವ ಕೃಷ್ಣಬೈರೇಗೌಡರಿಗೆ ನೀಡಿದ್ದಾರೆ.

ರಕ್ಷಿಸಲ್ಪಟ್ಟು ಸುರಕ್ಷಿತ ನೆಲೆಗೆ ಕರೆತರಲಾಗಿರುವ ಚಾರಣಿಗರ ಜೊತೆಗೂ ಮಾತನಾಡಿದ ಮುಖ್ಯಮಂತ್ರಿಗಳು, ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ ಎಂದು ಭರವಸೆ ನೀಡಿದ್ದಾರೆ.
ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲ್ಪಟ್ಟವರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

4 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

5 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

19 hours ago

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

1 day ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

1 day ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ: ಪತ್ನಿ, ಪ್ರಿಯಕರ ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು‌ ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…

2 days ago