ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಆಟೋ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಸಾಸಲು ಹೋಬಳಿಯ ಆರೂಢಿ ಸಮೀಪದ ಹನುಮಂತಪುರ ಬಳಿ ನಡೆದಿದೆ.
ಗಾಯಗೊಂಡ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು 108 ಆಂಬುಲೆನ್ಸ್ ಗೆ ಕರೆ ಮಾಡಲಾಗಿತ್ತು. ಆದರೆ, ಸ್ಥಳಕ್ಕೆ 108 ಆಂಬುಲೆನ್ಸ್ ಇದೂವರೆಗೂ ಬಂದಿಲ್ಲ. ಗಾಯಾಳುಗಳು ತೀವ್ರ ರಕ್ತ ಸ್ರಾವದಿಂದ ನರಳಾಡುತ್ತಿದ್ದಾರೆ. ಅವರ ಜೀವಕ್ಕೆ ಏನಾದರೂ ಅಪಾಯವಾದರೆ ಯಾರು ಹೊಣೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಆಟೋದಲ್ಲಿ ದಿಢೀರನೇ ತಾಂತ್ರಿಕ ಸಮಸ್ಯೆ ಕಂಡುಬಂದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ವೃದ್ಧರು, ಮಹಿಳೆಯರು, ಮಕ್ಕಳಿಗೆ ಗಂಭೀರಗಾಯಗಳಾಗಿವೆ.
ಘಟನೆ ನಡೆದು ಹಲವು ಗಂಟೆಗಳು ಕಳೆದರೂ 108 ಆಂಬುಲೆನ್ಸ್ ಬಾರದ ಹಿನ್ನೆಲೆ ಖಾಸಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಯಿತು ಎಂದು ಸ್ಥಳೀಯರು ತಿಳಿಸಿದರು.
ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….