ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಆಟೋ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಸಾಸಲು ಹೋಬಳಿಯ ಆರೂಢಿ ಸಮೀಪದ ಹನುಮಂತಪುರ ಬಳಿ ನಡೆದಿದೆ.
ಗಾಯಗೊಂಡ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು 108 ಆಂಬುಲೆನ್ಸ್ ಗೆ ಕರೆ ಮಾಡಲಾಗಿತ್ತು. ಆದರೆ, ಸ್ಥಳಕ್ಕೆ 108 ಆಂಬುಲೆನ್ಸ್ ಇದೂವರೆಗೂ ಬಂದಿಲ್ಲ. ಗಾಯಾಳುಗಳು ತೀವ್ರ ರಕ್ತ ಸ್ರಾವದಿಂದ ನರಳಾಡುತ್ತಿದ್ದಾರೆ. ಅವರ ಜೀವಕ್ಕೆ ಏನಾದರೂ ಅಪಾಯವಾದರೆ ಯಾರು ಹೊಣೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಆಟೋದಲ್ಲಿ ದಿಢೀರನೇ ತಾಂತ್ರಿಕ ಸಮಸ್ಯೆ ಕಂಡುಬಂದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ವೃದ್ಧರು, ಮಹಿಳೆಯರು, ಮಕ್ಕಳಿಗೆ ಗಂಭೀರಗಾಯಗಳಾಗಿವೆ.
ಘಟನೆ ನಡೆದು ಹಲವು ಗಂಟೆಗಳು ಕಳೆದರೂ 108 ಆಂಬುಲೆನ್ಸ್ ಬಾರದ ಹಿನ್ನೆಲೆ ಖಾಸಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಯಿತು ಎಂದು ಸ್ಥಳೀಯರು ತಿಳಿಸಿದರು.
ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…