ಚಾಲಕನ ನಿಯಂತ್ರಣ ತಪ್ಪಿ‌ ಮಗುಚಿ ಬಿದ್ದ 407 ಗೂಡ್ಸ್ ವಾಹನ

ದೊಡ್ಡಬಳ್ಳಾಪುರ-ನೆಲಮಂಗಲ ರಸ್ತೆಯ ಮಧುರೆ ಹೋಬಳಿ 11ನೇ ಮೈಲಿಯ ಎಚ್.ಪಿ ಬಂಕ್ ಬಳಿ 407 ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ‌ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ವೇಗವಾಗಿ ಎದುರು ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಚಾಲಕನ‌ ನಿಯಂತ್ರಣ ತಪ್ಪಿ 407 ಗೂಡ್ಸ್ ವಾಹನ ಮುಗುಚಿ ಬಿದ್ದಿದೆ.

ದಾಬಸ್ ಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ ತಪ್ಪಿಸಲು ಗೂಡ್ಸ್ ವಾಹನಗಳು ನೆಲಮಂಗಲ ರಸ್ತೆಯನ್ನು ಬಳಸುತ್ತಿವೆ.‌ ಇದರಿಂದ ವಾಹನ ದಟ್ಟಣೆ ಹೆಚ್ಚಾಗಿ ಅಪಘಾತಗಳ ಸಂಖ್ಯೆ ಏರುತ್ತಿದೆ. ರಸ್ತೆ ಅಗಲೀಕರಣ ಆಗಲಿಲ್ಲ. ಅಲ್ಲಲ್ಲಿ ಮೊಣಕಾಲುದ್ದ ಗುಂಡಿಗಳು ಹೀಗೆ ನಾನಾ ರೀತಿಯ ಸಮಸ್ಯೆಗಳು ಇವೆ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸದೇ ಸಂಬಂಧಪಟ್ಟವರು ಕಂಡು ಕಾಣದ ರೀತಿ ಇರುವುದರಿಂದ ಸಾರ್ವಜನಿಕರು ಸಾವು ನೋವು ಅನುಭವಿಸವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಳು‌ಮಲ್ಲಿಗೆ ಗ್ರಾಮದಲ್ಲಿ ರಸ್ತೆ ಇಕ್ಕೆಲಗಳಲ್ಲಿ ಮನೆಗಳು ಇದ್ದು, ಭಾರೀ ಗಾತ್ರದ ವಾಹನಗಳು ಸುಗಮವಾಗಿ ಚಲಿಸಲು ಹರಸಾಹಸಪಡುತ್ತವೆ. ಎರಡು ಭಾರೀ ಗಾತ್ರದ ವಾಹನಗಳು ಏಕಕಾಲದಲ್ಲಿ ಬಂದರೆ ಟ್ರಾಫಿಕ್ ಜಾಮ್ ಉಂಟಾಗಿ ಗಂಟೆಗಟ್ಟಲೇ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆ ಜಾಗದಲ್ಲಿ ರಸ್ತೆ ಅಗಲೀಕರಣ ಆಗಬೇಕಾಗಿದೆ. ರಸ್ತೆಗುಂಡಿಗಳನ್ನು ಮುಚ್ಚಬೇಕು. ಭಾರೀ ಗಾತ್ರದ ವಾಹನಗಳನ್ನು ಹೊಸಕೋಟೆ-ದಾಬಸ್ ಪೇಟೆ ಹೆದ್ದಾರಿಯಲ್ಲಿ ಹೋಗುವಂತೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

Ramesh Babu

Journalist

Recent Posts

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

1 hour ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

4 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

17 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 day ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

1 day ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

2 days ago