ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬೊಲೆರೊ ಪಿಕ್ ಅಪ್ ವಾಹನ: ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರು

ಕೃಷಿ ಸಂಬಂಧಿಸಿದ ಔಷಧ ತುಂಬಿದ್ದ ಬೊಲೆರೊ ಪಿಕ್ ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮುಗುಚಿ ಬಿದ್ದಿರುವ ಘಟನೆ ಘಾಟಿ ಹಾಗೂ ಮಾಕಳಿ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ಮಾರ್ಗ ಮಧ್ಯೆ ಬರುವ ದೊಡ್ಡಹಳ್ಳ ಬಳಿ ಇಂದು ಬೆಳಗ್ಗೆ ಸುಮಾರು 6 ಗಂಟೆಯಲ್ಲಿ ನಡೆದಿದೆ.

ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಬೊಲೆರೊ ಪಿಕ್ ಅಪ್ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಇಂದು ಬೆಳಗ್ಗೆ ಘಾಟಿ ಸುತ್ತಾಮುತ್ತ ಜಿಟಿಜಿಟಿ ಮಳೆಯಾಗಿದ್ದು, ಮಾಕಳಿ ಕಡೆಯಿಂದ ಘಾಟಿ ಕಡೆ ಬರುತ್ತಿದ್ದಾಗ ಇಳಿಜಾರು ಇದ್ದ ಕಾರಣ ಎಷ್ಟೇ ಬ್ರೇಕ್ ಹಾಕಿದರೂ‌ ಚಾಲಕನ ಹತೋಟಿಗೆ ಸಿಗದೆ ಸೇತುವೆ‌ ಮೇಲಿಂದ  ಹಳಕ್ಕೆ ಮುಗುಚಿ ಬಿದ್ದಿದೆ.

ಈ ರಸ್ತೆಯಲ್ಲಿ‌ ದೊಡ್ಡಹಳ್ಳಕ್ಕೆ ಸಣ್ಣ ಸೇತುವೆ ನಿರ್ಮಾಣ ಮಾಡಲಾಗಿದೆ. ಇಲ್ಲಿ ಎರಡು ಕಡಿದಾದ ತಿರುವುಗಳು ಇದ್ದು, ಇವುಗಳನ್ನು ವೈಜ್ಞಾನಿಕವಾಗಿ ದುರಸ್ತಿ‌ ಮಾಡದೇ ರಸ್ತೆ ಹಾಗೂ ಸೇತುವೆ ನಿರ್ಮಾಣ ಮಾಡಲಾಗಿದೆ.

ಈ ಸೇತುವೆ ಬಳಿ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಕೂಡಲೇ ಸಂಬಂಧಪಟ್ಟ ಇಲಾಖೆ ಎಚ್ಚೆತ್ತು ವೈಜ್ಞಾನಿಕವಾಗಿ ರಸ್ತೆ ಕಾಮಗಾರಿ‌ ನಡೆಸಬೇಕು‌ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

1 hour ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

3 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

4 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

10 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

11 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

22 hours ago