ಕೃಷಿ ಸಂಬಂಧಿಸಿದ ಔಷಧ ತುಂಬಿದ್ದ ಬೊಲೆರೊ ಪಿಕ್ ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮುಗುಚಿ ಬಿದ್ದಿರುವ ಘಟನೆ ಘಾಟಿ ಹಾಗೂ ಮಾಕಳಿ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ಮಾರ್ಗ ಮಧ್ಯೆ ಬರುವ ದೊಡ್ಡಹಳ್ಳ ಬಳಿ ಇಂದು ಬೆಳಗ್ಗೆ ಸುಮಾರು 6 ಗಂಟೆಯಲ್ಲಿ ನಡೆದಿದೆ.
ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಬೊಲೆರೊ ಪಿಕ್ ಅಪ್ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಇಂದು ಬೆಳಗ್ಗೆ ಘಾಟಿ ಸುತ್ತಾಮುತ್ತ ಜಿಟಿಜಿಟಿ ಮಳೆಯಾಗಿದ್ದು, ಮಾಕಳಿ ಕಡೆಯಿಂದ ಘಾಟಿ ಕಡೆ ಬರುತ್ತಿದ್ದಾಗ ಇಳಿಜಾರು ಇದ್ದ ಕಾರಣ ಎಷ್ಟೇ ಬ್ರೇಕ್ ಹಾಕಿದರೂ ಚಾಲಕನ ಹತೋಟಿಗೆ ಸಿಗದೆ ಸೇತುವೆ ಮೇಲಿಂದ ಹಳಕ್ಕೆ ಮುಗುಚಿ ಬಿದ್ದಿದೆ.
ಈ ರಸ್ತೆಯಲ್ಲಿ ದೊಡ್ಡಹಳ್ಳಕ್ಕೆ ಸಣ್ಣ ಸೇತುವೆ ನಿರ್ಮಾಣ ಮಾಡಲಾಗಿದೆ. ಇಲ್ಲಿ ಎರಡು ಕಡಿದಾದ ತಿರುವುಗಳು ಇದ್ದು, ಇವುಗಳನ್ನು ವೈಜ್ಞಾನಿಕವಾಗಿ ದುರಸ್ತಿ ಮಾಡದೇ ರಸ್ತೆ ಹಾಗೂ ಸೇತುವೆ ನಿರ್ಮಾಣ ಮಾಡಲಾಗಿದೆ.
ಈ ಸೇತುವೆ ಬಳಿ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಕೂಡಲೇ ಸಂಬಂಧಪಟ್ಟ ಇಲಾಖೆ ಎಚ್ಚೆತ್ತು ವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…