ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನ ಖಾಲಿ ಇದ್ದ ಹಿನ್ನೆಲೆಯಲ್ಲಿ ಶನಿವಾರ ಸಂಘದ ಕಚೇರಿ ಆವರಣದಲ್ಲಿ ನಡೆದ ಚುನಾವಣ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೇವಲ ಎಸಿ ಗೋವಿಂದಪ್ಪ ಮಾತ್ರ ನಾಮಪತ್ರ ಸಲ್ಲಿಸಿ ಯಾರು ಕೂಡ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಚುನಾವಣಾ ಅಧಿಕಾರಿ ಕೆ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ನೂತನವಾಗಿ ಆಯ್ಕೆಯಾದ ಎಸಿ ಗೋವಿಂದಪ್ಪ ಮಾತನಾಡಿ, ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರಿಗೆ ಧನ್ಯವಾದಗಳು ತಿಳಿಸುತ್ತೇವೆ. ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲವಾಗುವಂತ ಸಾಲ ಸೌಲಭ್ಯಗಳು ಸಹಕಾರ ಸಂಘದಿಂದ ರೈತರಿಗೆ ದೊರೆಯುವ ಯೋಜನೆಗಳನ್ನು ಪ್ರಾಮಾಣಿಕತೆಯಿಂದ ಕೊಡಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ದೇಶಕರುಗಳ ಸಲಹೆ ಮೇರೆಗೆ ಸೇವೆ ಸಲ್ಲಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳು ಹಾಗೂ ಸದಸ್ಯರು ಅಭಿನಂದಿಸಿದರು.

Ramesh Babu

Journalist

Recent Posts

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

9 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

9 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

10 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

17 hours ago

ಅನ್ನದಾತ ಅನಾಥನಾಗುವ ಮುನ್ನ……. ಅನ್ನಕ್ಕಾಗಿ ನಾವು ಪರದಾಡುವ ಮುನ್ನ……

ಡಿಸೆಂಬರ್ 23...... ರೈತರಿಗೂ ಒಂದು ದಿನವಂತೆ..... ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ...... ಇತರ ಕೆಟ್ಟ…

21 hours ago

ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ: 6087238ರೂ. ಕಾಣಿಕೆ‌ ಸಂಗ್ರಹ

ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಇಂದು (ಶನಿವಾರ) ಹುಂಡಿ ಕಾಣಿಕೆ ಎಣಿಕೆ ಕಾರ್ಯ…

1 day ago