ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನ ಖಾಲಿ ಇದ್ದ ಹಿನ್ನೆಲೆಯಲ್ಲಿ ಶನಿವಾರ ಸಂಘದ ಕಚೇರಿ ಆವರಣದಲ್ಲಿ ನಡೆದ ಚುನಾವಣ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೇವಲ ಎಸಿ ಗೋವಿಂದಪ್ಪ ಮಾತ್ರ ನಾಮಪತ್ರ ಸಲ್ಲಿಸಿ ಯಾರು ಕೂಡ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಚುನಾವಣಾ ಅಧಿಕಾರಿ ಕೆ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ನೂತನವಾಗಿ ಆಯ್ಕೆಯಾದ ಎಸಿ ಗೋವಿಂದಪ್ಪ ಮಾತನಾಡಿ, ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರಿಗೆ ಧನ್ಯವಾದಗಳು ತಿಳಿಸುತ್ತೇವೆ. ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲವಾಗುವಂತ ಸಾಲ ಸೌಲಭ್ಯಗಳು ಸಹಕಾರ ಸಂಘದಿಂದ ರೈತರಿಗೆ ದೊರೆಯುವ ಯೋಜನೆಗಳನ್ನು ಪ್ರಾಮಾಣಿಕತೆಯಿಂದ ಕೊಡಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ದೇಶಕರುಗಳ ಸಲಹೆ ಮೇರೆಗೆ ಸೇವೆ ಸಲ್ಲಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳು ಹಾಗೂ ಸದಸ್ಯರು ಅಭಿನಂದಿಸಿದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

12 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

18 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago