ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನ ಖಾಲಿ ಇದ್ದ ಹಿನ್ನೆಲೆಯಲ್ಲಿ ಶನಿವಾರ ಸಂಘದ ಕಚೇರಿ ಆವರಣದಲ್ಲಿ ನಡೆದ ಚುನಾವಣ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೇವಲ ಎಸಿ ಗೋವಿಂದಪ್ಪ ಮಾತ್ರ ನಾಮಪತ್ರ ಸಲ್ಲಿಸಿ ಯಾರು ಕೂಡ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಚುನಾವಣಾ ಅಧಿಕಾರಿ ಕೆ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ನೂತನವಾಗಿ ಆಯ್ಕೆಯಾದ ಎಸಿ ಗೋವಿಂದಪ್ಪ ಮಾತನಾಡಿ, ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರಿಗೆ ಧನ್ಯವಾದಗಳು ತಿಳಿಸುತ್ತೇವೆ. ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲವಾಗುವಂತ ಸಾಲ ಸೌಲಭ್ಯಗಳು ಸಹಕಾರ ಸಂಘದಿಂದ ರೈತರಿಗೆ ದೊರೆಯುವ ಯೋಜನೆಗಳನ್ನು ಪ್ರಾಮಾಣಿಕತೆಯಿಂದ ಕೊಡಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ದೇಶಕರುಗಳ ಸಲಹೆ ಮೇರೆಗೆ ಸೇವೆ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳು ಹಾಗೂ ಸದಸ್ಯರು ಅಭಿನಂದಿಸಿದರು.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…