ಕೋಲಾರ: ಹಾಲು ಉತ್ಪಾದಕರು ತಮ್ಮ ರಾಸುಗಳಿಗೆ ಜೀವ ವಿಮೆ ಮಾಡಿಸುವ ಮೂಲಕ ಆಕಸ್ಮಿಕವಾಗಿ ಜೀವ ಹಾನಿಯಿಂದ ಉಂಟಾಗುವ ಆರ್ಥಿಕ ನಷ್ಟಕ್ಕೆ ಸಹಕಾರಿಯಾಗಲಿದ್ದು, ಪ್ರತಿಯೊಬ್ಬ ಹಾಲು ಉತ್ಪಾದಕರು ಸಹ ವಿಮೆ ಮಾಡಿಸಿಕೊಳ್ಳಿ ಎಂದು ಕೋಚಿಮುಲ್ ವೈದ್ಯಾಧಿಕಾರಿ ಆಶ್ರಫ್ ಅಹಮದ್ ತಿಳಿಸಿದರು.
ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾಸುಗಳಿಗೆ ವಿಮೆ ಮಾಡಿಸಿ ಮಾತನಾಡಿದ ಅವರು, ಹೈನುಗಾರಿಕೆಯು ಗ್ರಾಮೀಣ ಜನರ ಬದುಕಿಗೆ ಆಸರೆಯಾಗಿದ್ದು, ರಾಸುಗಳಿಗೆ ವಿಮೆ ಮಾಡಿಸಿ ಅದರಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಜಿಲ್ಲೆಯಾದ್ಯಂತ ಹೈನುಗಾರಿಕೆ ಮಾಡಿಕೊಂಡು ಸಾವಿರಾರು ಕುಟುಂಬಗಳು ಬದುಕುತ್ತಿವೆ ಹಾಲು ಉತ್ಪಾದಕರ ಮಕ್ಕಳ ಶಿಕ್ಷ ಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಓದುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಲಾಗುತ್ತಿದೆ ಇದರ ಸದುಪಯೋಗವನ್ನು ಪಡಿಸಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಆರ್.ಗೋಪಾಲಪ್ಪ, ಸಹಾಯಕ ಆರ್ ಬೈಚೇಗೌಡ, ಉತ್ಪಾದಕರು ಇದ್ದರು.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…