ಕೋಲಾರ: ಹಾಲು ಉತ್ಪಾದಕರು ತಮ್ಮ ರಾಸುಗಳಿಗೆ ಜೀವ ವಿಮೆ ಮಾಡಿಸುವ ಮೂಲಕ ಆಕಸ್ಮಿಕವಾಗಿ ಜೀವ ಹಾನಿಯಿಂದ ಉಂಟಾಗುವ ಆರ್ಥಿಕ ನಷ್ಟಕ್ಕೆ ಸಹಕಾರಿಯಾಗಲಿದ್ದು, ಪ್ರತಿಯೊಬ್ಬ ಹಾಲು ಉತ್ಪಾದಕರು ಸಹ ವಿಮೆ ಮಾಡಿಸಿಕೊಳ್ಳಿ ಎಂದು ಕೋಚಿಮುಲ್ ವೈದ್ಯಾಧಿಕಾರಿ ಆಶ್ರಫ್ ಅಹಮದ್ ತಿಳಿಸಿದರು.
ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾಸುಗಳಿಗೆ ವಿಮೆ ಮಾಡಿಸಿ ಮಾತನಾಡಿದ ಅವರು, ಹೈನುಗಾರಿಕೆಯು ಗ್ರಾಮೀಣ ಜನರ ಬದುಕಿಗೆ ಆಸರೆಯಾಗಿದ್ದು, ರಾಸುಗಳಿಗೆ ವಿಮೆ ಮಾಡಿಸಿ ಅದರಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಜಿಲ್ಲೆಯಾದ್ಯಂತ ಹೈನುಗಾರಿಕೆ ಮಾಡಿಕೊಂಡು ಸಾವಿರಾರು ಕುಟುಂಬಗಳು ಬದುಕುತ್ತಿವೆ ಹಾಲು ಉತ್ಪಾದಕರ ಮಕ್ಕಳ ಶಿಕ್ಷ ಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಓದುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಲಾಗುತ್ತಿದೆ ಇದರ ಸದುಪಯೋಗವನ್ನು ಪಡಿಸಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಆರ್.ಗೋಪಾಲಪ್ಪ, ಸಹಾಯಕ ಆರ್ ಬೈಚೇಗೌಡ, ಉತ್ಪಾದಕರು ಇದ್ದರು.
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…