ಕೋಲಾರ: ಹಾಲು ಉತ್ಪಾದಕರು ತಮ್ಮ ರಾಸುಗಳಿಗೆ ಜೀವ ವಿಮೆ ಮಾಡಿಸುವ ಮೂಲಕ ಆಕಸ್ಮಿಕವಾಗಿ ಜೀವ ಹಾನಿಯಿಂದ ಉಂಟಾಗುವ ಆರ್ಥಿಕ ನಷ್ಟಕ್ಕೆ ಸಹಕಾರಿಯಾಗಲಿದ್ದು, ಪ್ರತಿಯೊಬ್ಬ ಹಾಲು ಉತ್ಪಾದಕರು ಸಹ ವಿಮೆ ಮಾಡಿಸಿಕೊಳ್ಳಿ ಎಂದು ಕೋಚಿಮುಲ್ ವೈದ್ಯಾಧಿಕಾರಿ ಆಶ್ರಫ್ ಅಹಮದ್ ತಿಳಿಸಿದರು.
ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾಸುಗಳಿಗೆ ವಿಮೆ ಮಾಡಿಸಿ ಮಾತನಾಡಿದ ಅವರು, ಹೈನುಗಾರಿಕೆಯು ಗ್ರಾಮೀಣ ಜನರ ಬದುಕಿಗೆ ಆಸರೆಯಾಗಿದ್ದು, ರಾಸುಗಳಿಗೆ ವಿಮೆ ಮಾಡಿಸಿ ಅದರಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಜಿಲ್ಲೆಯಾದ್ಯಂತ ಹೈನುಗಾರಿಕೆ ಮಾಡಿಕೊಂಡು ಸಾವಿರಾರು ಕುಟುಂಬಗಳು ಬದುಕುತ್ತಿವೆ ಹಾಲು ಉತ್ಪಾದಕರ ಮಕ್ಕಳ ಶಿಕ್ಷ ಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಓದುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಲಾಗುತ್ತಿದೆ ಇದರ ಸದುಪಯೋಗವನ್ನು ಪಡಿಸಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಆರ್.ಗೋಪಾಲಪ್ಪ, ಸಹಾಯಕ ಆರ್ ಬೈಚೇಗೌಡ, ಉತ್ಪಾದಕರು ಇದ್ದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…