Categories: ಕೋಲಾರ

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸಿ. ಅಮರೇಶ್ ತಿಳಿಸಿದರು.

ಸಂಘದ ಆವರಣದಲ್ಲಿ ಗುರುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಹಾಲಿಗೆ ಮಾತ್ರ ನಿಗದಿತ ಬೆಲೆ ಇದ್ದು, ಉತ್ಪಾದಕರ ಖಾತೆಗೆ ಪ್ರತಿ 15 ದಿನಕ್ಕೊಮ್ಮೆ ಹಣ ನೇರವಾಗಿ ಸಂದಾಯವಾಗುತ್ತದೆ. ಹೈನುಗಾರಿಕೆ ಅನೇಕ ಕುಟುಂಬಗಳ ಜೀವನಾಧಾರವಾಗಿದ್ದು ಆರ್ಥಿಕ ಮೂಲವಾಗಿದೆ ಉತ್ಪಾದಕರು ಗುಣಮಟ್ಟದ ಹಾಲನ್ನು ಸಂಘಕ್ಕೆ ಪೂರೈಸಿದರೆ ಉತ್ತಮ ಬೆಲೆ ಪಡೆಯಬಹುದು. ಹಾಲಿನ ಗುಣಮಟ್ಟ ಕಾಪಾಡುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕೋಮುಲ್ ಉಪ ವ್ಯವಸ್ಥಾಪಕ ಡಾ. ಮಹೇಶ್ ಮಾತನಾಡಿ, ಸಂಘ ನಿರಂತರವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಇದಕ್ಕೆ ಹಾಲು ಉತ್ಪಾದಕರು ಹಾಗೂ ಆಡಳಿತ ಮಂಡಳಿಯ ಸಹಕಾರ ಮುಖ್ಯವಾಗಿದೆ. ಒಕ್ಕೂಟದಿಂದ ದೊರೆಯುವ ಸೌಲಭ್ಯಗಳನ್ನು ಉತ್ಪಾದಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕೋಮುಲ್ ವಿಸ್ತರಣಾಧಿಕಾರಿ ರಾಮಾಂಜಿನಪ್ಪ, ಉಪಾಧ್ಯಕ್ಷ ಸಿ.ಎಂ. ನರೇಶ್, ನಿರ್ದೇಶಕರಾದ ಸಿ.ಸಿ.ಶ್ರೀನಿವಾಸ್, ಸಿ.ನಾಗರಾಜ್, ಸಿ.ವಿ.ಅಚ್ಚಪ್ಪ, ಬಿ.ಎಂ.ಶಾರದದೇವಿ, ಭಾಗ್ಯಲಕ್ಷ್ಮಿ, ವೆಂಕಟಮ್ಮ ಕೆ.ಸುಧಾ ಸವಿತಾ ಕಾರ್ಯದರ್ಶಿ ಸಿ.ಆರ್ ಗೋಪಾಲಪ್ಪ, ಹಾಲು ಪರೀಕ್ಷಕ ಸಿ.ಎಂ ರಮೇಶ್, ಹಿರಿಯ ಮುಖಂಡರಾದ ಬಿ.ಶ್ರೀನಿವಾಸಪ್ಪ, ಸಿ.ಎಂ ಬೈರಪ್ಪ, ವೆಂಕಟರಣಪ್ಪ, ಸಿ.ಎಸ್.ಅಂಜನಗೌಡ, ಸುರೇಶ್, ಶಿವಕುಮಾರ್, ಸಿ.ಎಂ ನಾರಾಯಣಸ್ವಾಮಿ, ಅಪ್ಪಯ್ಯಣ್ಣ, ಲಕ್ಷ್ಮೀಪತಿ, ಸಿ.ಕೆ ನಾರಾಯಣಸ್ವಾಮಿ, ಸೋಮೇಶ್, ಸೇರಿದಂತೆ ಹಾಲು ಉತ್ಪಾದಕರು ಇದ್ದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

22 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

2 days ago