Categories: ಕೋಲಾರ

ಚಿಕ್ಕನಹಳ್ಳಿ ಡೇರಿಗೆ 2.33 ಲಕ್ಷ ನಿವ್ವಳ ಲಾಭ

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆಯು ಗುರುವಾರ ಸಂಘದ ಕಛೇರಿಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಿ.ಅಮರೇಶ್ ಮಾತನಾಡಿ, ಸಂಘದ ಆಡಳಿತ ಮಂಡಳಿ ಹಾಗೂ ಹಾಲು ಉತ್ಪಾದಕರ ಸಹಕಾರದಿಂದ 2023-24ನೇ ಸಾಲಿನಲ್ಲಿ 3.79 ಲಕ್ಷ ಲಾಭಾಂಶ ಬಂದಿದ್ದು ಇದರಲ್ಲಿನ ನಿವ್ವಳ ಲಾಭವು 2.33 ಲಕ್ಷ ಬಂದಿದ್ದು ಈ ವರ್ಷವು ಹಾಲು ಉತ್ಪಾದಕಕರಿಗೆ ಶೇ 2.10% ಬೋನಸ್ ನೀಡಲಾಗುತ್ತದೆ ಎಂದರು,

ಸಹಕಾರ ಕ್ಷೇತ್ರದಲ್ಲಿ ಟೀಕೆಗಳು ಸಹಜವಾಗಿಯೇ ಇರುತ್ತವೆ ಟೀಕೆಗಳನ್ನು ಮೆಟ್ಟಿ ಪ್ರಮಾಣಿಕವಾಗಿ ಕೆಲಸ ಮಾಡುವ ಮೂಲಕ ಡೈರಿಯ ಮತ್ತಷ್ಟು ಅಭಿವೃದ್ಧಿಗೆ ಉತ್ಪಾದಕರು, ಆಡಳಿತ ಮಂಡಳಿಯ ಸದಸ್ಯರು, ಹಾಗೂ ಸಿಬ್ಬಂದಿ ಒಟ್ಟಾಗಿ ಕೆಲಸ ಮಾಡೋಣ ಡೈರಿಗೆ ಉತ್ಪಾದಕರೇ ಶಕ್ತಿಯಾಗಿದ್ದು ಗುಣಮಟ್ಟದ ಹಾಲು ಪೂರೈಕೆಯಿಂದ ಸಂಘದಿಂದ ಸಿಗುವ ವಿಶೇಷ ಸೌಲಭ್ಯಗಳನ್ನು ಪಡೆಯಬಹುದು ಎಂದರು.

ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ ಹಾಲಿನ ಡೇರಿಗಳು ಅಭಿವೃದ್ಧಿಯಾಗಬೇಕಾದರೆ, ಪಕ್ಷಾತೀತವಾಗಿ ಕೆಲಸ ಮಾಡಬೇಕು. ರೈತರು ಉತ್ತಮ ಕೊಬ್ಬಿನ ಅಂಶವಿರುವ ಹಾಲು ಸರಬರಾಜು ಮಾಡಿದಾಗ ಮಾತ್ರ ಡೇರಿ ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗುತ್ತದೆ ಹಸುಗಳ ಹೊಸ ಹೊಸ ರೋಗಗಳು ಬಂದ್ದು ಸಾಕಾಣಿಕೆ ಕಷ್ಟವಾಗಿದ್ದು ಹೆಚ್ಚಿನ ಕಾಳಜಿ ವಹಿಸಿ ಕಾಲಕಾಲಕ್ಕೆ ವಾಕ್ಸಿನ್ ಮಾಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೋಲಾರ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಎಸ್ ರಾಮಾಂಜಿನಪ್ಪ, ಆಡಳಿತ ಮಂಡಳಿ ನಿರ್ದೇಶಕರಾದ ಬಿ.ಶ್ರೀನಿವಾಸಪ್ಪ, ಸಿ ನಾಗರಾಜ್, ರಮೇಶ್, ಅಚ್ಚಪ್ಪ, ಸಿ.ಸಿ ಶ್ರೀನಿವಾಸ್‌, ಭಾಗ್ಯಲಕ್ಷ್ಮೀ, ಶಾರದದೇವಿ, ಸೊಣ್ಣಮ್ಮ ವೆಂಕಟಮ್ಮ ವಿಮಲಮ್ಮ, ಕಾರ್ಯದರ್ಶಿ ಆ‌ರ್ ಗೋಪಾಲಪ್ಪ, ಗ್ರಾಮಸ್ಥರಾದ ಸಿ.ಎಸ್ ಅಂಜನಗೌಡ, ವೆಂಕಟರಮಣಪ್ಪ, ಶಿವಕುಮಾರ್ ಸೇರಿದಂತೆ ಹಾಲು ಉತ್ಪಾದಕರು, ಗ್ರಾಮಸ್ಥರು ಇದ್ದರು,

Ramesh Babu

Journalist

Recent Posts

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

30 minutes ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

21 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

22 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 day ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

2 days ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 days ago