Categories: ಕೋಲಾರ

ಚಿಕ್ಕನಹಳ್ಳಿ ಡೇರಿಗೆ 2.33 ಲಕ್ಷ ನಿವ್ವಳ ಲಾಭ

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆಯು ಗುರುವಾರ ಸಂಘದ ಕಛೇರಿಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಿ.ಅಮರೇಶ್ ಮಾತನಾಡಿ, ಸಂಘದ ಆಡಳಿತ ಮಂಡಳಿ ಹಾಗೂ ಹಾಲು ಉತ್ಪಾದಕರ ಸಹಕಾರದಿಂದ 2023-24ನೇ ಸಾಲಿನಲ್ಲಿ 3.79 ಲಕ್ಷ ಲಾಭಾಂಶ ಬಂದಿದ್ದು ಇದರಲ್ಲಿನ ನಿವ್ವಳ ಲಾಭವು 2.33 ಲಕ್ಷ ಬಂದಿದ್ದು ಈ ವರ್ಷವು ಹಾಲು ಉತ್ಪಾದಕಕರಿಗೆ ಶೇ 2.10% ಬೋನಸ್ ನೀಡಲಾಗುತ್ತದೆ ಎಂದರು,

ಸಹಕಾರ ಕ್ಷೇತ್ರದಲ್ಲಿ ಟೀಕೆಗಳು ಸಹಜವಾಗಿಯೇ ಇರುತ್ತವೆ ಟೀಕೆಗಳನ್ನು ಮೆಟ್ಟಿ ಪ್ರಮಾಣಿಕವಾಗಿ ಕೆಲಸ ಮಾಡುವ ಮೂಲಕ ಡೈರಿಯ ಮತ್ತಷ್ಟು ಅಭಿವೃದ್ಧಿಗೆ ಉತ್ಪಾದಕರು, ಆಡಳಿತ ಮಂಡಳಿಯ ಸದಸ್ಯರು, ಹಾಗೂ ಸಿಬ್ಬಂದಿ ಒಟ್ಟಾಗಿ ಕೆಲಸ ಮಾಡೋಣ ಡೈರಿಗೆ ಉತ್ಪಾದಕರೇ ಶಕ್ತಿಯಾಗಿದ್ದು ಗುಣಮಟ್ಟದ ಹಾಲು ಪೂರೈಕೆಯಿಂದ ಸಂಘದಿಂದ ಸಿಗುವ ವಿಶೇಷ ಸೌಲಭ್ಯಗಳನ್ನು ಪಡೆಯಬಹುದು ಎಂದರು.

ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ ಹಾಲಿನ ಡೇರಿಗಳು ಅಭಿವೃದ್ಧಿಯಾಗಬೇಕಾದರೆ, ಪಕ್ಷಾತೀತವಾಗಿ ಕೆಲಸ ಮಾಡಬೇಕು. ರೈತರು ಉತ್ತಮ ಕೊಬ್ಬಿನ ಅಂಶವಿರುವ ಹಾಲು ಸರಬರಾಜು ಮಾಡಿದಾಗ ಮಾತ್ರ ಡೇರಿ ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗುತ್ತದೆ ಹಸುಗಳ ಹೊಸ ಹೊಸ ರೋಗಗಳು ಬಂದ್ದು ಸಾಕಾಣಿಕೆ ಕಷ್ಟವಾಗಿದ್ದು ಹೆಚ್ಚಿನ ಕಾಳಜಿ ವಹಿಸಿ ಕಾಲಕಾಲಕ್ಕೆ ವಾಕ್ಸಿನ್ ಮಾಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೋಲಾರ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಎಸ್ ರಾಮಾಂಜಿನಪ್ಪ, ಆಡಳಿತ ಮಂಡಳಿ ನಿರ್ದೇಶಕರಾದ ಬಿ.ಶ್ರೀನಿವಾಸಪ್ಪ, ಸಿ ನಾಗರಾಜ್, ರಮೇಶ್, ಅಚ್ಚಪ್ಪ, ಸಿ.ಸಿ ಶ್ರೀನಿವಾಸ್‌, ಭಾಗ್ಯಲಕ್ಷ್ಮೀ, ಶಾರದದೇವಿ, ಸೊಣ್ಣಮ್ಮ ವೆಂಕಟಮ್ಮ ವಿಮಲಮ್ಮ, ಕಾರ್ಯದರ್ಶಿ ಆ‌ರ್ ಗೋಪಾಲಪ್ಪ, ಗ್ರಾಮಸ್ಥರಾದ ಸಿ.ಎಸ್ ಅಂಜನಗೌಡ, ವೆಂಕಟರಮಣಪ್ಪ, ಶಿವಕುಮಾರ್ ಸೇರಿದಂತೆ ಹಾಲು ಉತ್ಪಾದಕರು, ಗ್ರಾಮಸ್ಥರು ಇದ್ದರು,

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

9 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

10 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

15 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago