ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆಯು ಗುರುವಾರ ಸಂಘದ ಕಛೇರಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಿ.ಅಮರೇಶ್ ಮಾತನಾಡಿ, ಸಂಘದ ಆಡಳಿತ ಮಂಡಳಿ ಹಾಗೂ ಹಾಲು ಉತ್ಪಾದಕರ ಸಹಕಾರದಿಂದ 2023-24ನೇ ಸಾಲಿನಲ್ಲಿ 3.79 ಲಕ್ಷ ಲಾಭಾಂಶ ಬಂದಿದ್ದು ಇದರಲ್ಲಿನ ನಿವ್ವಳ ಲಾಭವು 2.33 ಲಕ್ಷ ಬಂದಿದ್ದು ಈ ವರ್ಷವು ಹಾಲು ಉತ್ಪಾದಕಕರಿಗೆ ಶೇ 2.10% ಬೋನಸ್ ನೀಡಲಾಗುತ್ತದೆ ಎಂದರು,
ಸಹಕಾರ ಕ್ಷೇತ್ರದಲ್ಲಿ ಟೀಕೆಗಳು ಸಹಜವಾಗಿಯೇ ಇರುತ್ತವೆ ಟೀಕೆಗಳನ್ನು ಮೆಟ್ಟಿ ಪ್ರಮಾಣಿಕವಾಗಿ ಕೆಲಸ ಮಾಡುವ ಮೂಲಕ ಡೈರಿಯ ಮತ್ತಷ್ಟು ಅಭಿವೃದ್ಧಿಗೆ ಉತ್ಪಾದಕರು, ಆಡಳಿತ ಮಂಡಳಿಯ ಸದಸ್ಯರು, ಹಾಗೂ ಸಿಬ್ಬಂದಿ ಒಟ್ಟಾಗಿ ಕೆಲಸ ಮಾಡೋಣ ಡೈರಿಗೆ ಉತ್ಪಾದಕರೇ ಶಕ್ತಿಯಾಗಿದ್ದು ಗುಣಮಟ್ಟದ ಹಾಲು ಪೂರೈಕೆಯಿಂದ ಸಂಘದಿಂದ ಸಿಗುವ ವಿಶೇಷ ಸೌಲಭ್ಯಗಳನ್ನು ಪಡೆಯಬಹುದು ಎಂದರು.
ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ ಹಾಲಿನ ಡೇರಿಗಳು ಅಭಿವೃದ್ಧಿಯಾಗಬೇಕಾದರೆ, ಪಕ್ಷಾತೀತವಾಗಿ ಕೆಲಸ ಮಾಡಬೇಕು. ರೈತರು ಉತ್ತಮ ಕೊಬ್ಬಿನ ಅಂಶವಿರುವ ಹಾಲು ಸರಬರಾಜು ಮಾಡಿದಾಗ ಮಾತ್ರ ಡೇರಿ ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗುತ್ತದೆ ಹಸುಗಳ ಹೊಸ ಹೊಸ ರೋಗಗಳು ಬಂದ್ದು ಸಾಕಾಣಿಕೆ ಕಷ್ಟವಾಗಿದ್ದು ಹೆಚ್ಚಿನ ಕಾಳಜಿ ವಹಿಸಿ ಕಾಲಕಾಲಕ್ಕೆ ವಾಕ್ಸಿನ್ ಮಾಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಕೋಲಾರ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಎಸ್ ರಾಮಾಂಜಿನಪ್ಪ, ಆಡಳಿತ ಮಂಡಳಿ ನಿರ್ದೇಶಕರಾದ ಬಿ.ಶ್ರೀನಿವಾಸಪ್ಪ, ಸಿ ನಾಗರಾಜ್, ರಮೇಶ್, ಅಚ್ಚಪ್ಪ, ಸಿ.ಸಿ ಶ್ರೀನಿವಾಸ್, ಭಾಗ್ಯಲಕ್ಷ್ಮೀ, ಶಾರದದೇವಿ, ಸೊಣ್ಣಮ್ಮ ವೆಂಕಟಮ್ಮ ವಿಮಲಮ್ಮ, ಕಾರ್ಯದರ್ಶಿ ಆರ್ ಗೋಪಾಲಪ್ಪ, ಗ್ರಾಮಸ್ಥರಾದ ಸಿ.ಎಸ್ ಅಂಜನಗೌಡ, ವೆಂಕಟರಮಣಪ್ಪ, ಶಿವಕುಮಾರ್ ಸೇರಿದಂತೆ ಹಾಲು ಉತ್ಪಾದಕರು, ಗ್ರಾಮಸ್ಥರು ಇದ್ದರು,
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…