Categories: ಕೋಲಾರ

ಚಿಕ್ಕನಹಳ್ಳಿ ಡೇರಿಯಲ್ಲಿ ಸರಕಾರಿ ಸೌಲಭ್ಯಗಳ ಕುರಿತ ಮಾಹಿತಿ ಕಾರ್ಯಾಗಾರ

ಕೋಲಾರ: ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸೋಮವಾರ ಹಾಲು ಉತ್ಪಾದಕರ ಸಹಕಾರ ಸಂಘ, ಕೃಷಿ ಇಲಾಖೆ, ಹಾಗೂ ತೋಟಗಾರಿಕೆ ಇಲಾಖೆಯ ವತಿಯಿಂದ ರೈತರಿಗೆ ಹಾಗೂ ಹಾಲು ಉತ್ಪಾದಕರಿಗೆ ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆ ಸೇರಿದಂತೆ ಸರಕಾರದಿಂದ ಸಿಗುವ ಸೌಲಭ್ಯಗಳು ಕುರಿತಂತೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು,

ಈ ಕಾರ್ಯಾಗಾರದಲ್ಲಿ ಕೃಷಿ ಇಲಾಖೆಯ ಅಭಿಯಂತರ ಎನ್ ಸುನಿಲ್ ಮಾಹಿತಿ ನೀಡಿ ಮಾತನಾಡಿದ ಅವರು, ಸರಕಾರದ ವಿವಿಧ ಇಲಾಖೆಗಳಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ರೈತರಿಗೆ ಅರಿವು ಮೂಡಿಸಿ ಅದರ ಸದುಪಯೋಗವನ್ನು ಗ್ರಾಮದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿದ್ದೇವೆ. ರೈತರಿಗೆ ಹಲವು ರೀತಿಯ ಸೌಲಭ್ಯಗಳು ಇದ್ದರೂ ಈ ಬಗ್ಗೆ ರೈತರಲ್ಲಿ ಮಾಹಿತಿಯ ಕೊರತೆಯಿಂದ ರೈತರಿಗೆ ಸರಿಯಾಗಿ ತಲುಪುತ್ತಿಲ್ಲ. ಮಾಹಿತಿ ಪಡೆದ ಪ್ರತಿಯೊಬ್ಬರೂ ಬೇರೆಯವರಿಗೆ ಮಾಹಿತಿ ನೀಡಿ ಅವರು ಕೂಡ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳುವಂತೆ ಮಾಡಬೇಕಾಗಿದೆ ಎಂದರು.

ರೈತರು ತಮ್ಮ ಸ್ವಂತ ಜಮೀನುಗಳಲ್ಲಿ ಮಳೆ ನೀರು ವ್ಯರ್ಥವಾಗದಂತೆ ಹೊಂಡದಲ್ಲಿ ಸಂಗ್ರಹಿಸಿ ಅದನ್ನು ಕೃಷಿಗೆ ಬಳಸಬಹುದಾಗಿದೆ. ಜೊತೆಗೆ ಬದು ನಿರ್ಮಿಸಿಕೊಂಡು ಮಳೆ ನೀರು ಹಾಗೂ ಮಣ್ಣು ಹೊರಗಡೆ ಹೋಗದಂತೆ ತಡೆಯಬಹುದಾಗಿದೆ. ಕೃಷಿ ಹಾಗೂ ಹೈನುಗಾರಿಕಾ ಚಟುವಟಿಕೆಗಳಿಗೆ ಯಂತ್ರೋಪಕರಣಗಳನ್ನು ನೀಡಲಿದ್ದು, ಇದರ ಸದುಪಯೋಗವನ್ನು ಪಡಿಸಿಕೊಳ್ಳಿ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಚಿಕ್ಕನಹಳ್ಳಿ ಡೇರಿ ಅಧ್ಯಕ್ಷ ಸಿ.ಅಮರೇಶ್, ಕಾರ್ಯದರ್ಶಿ ಆರ್ ಗೋಪಾಲಪ್ಪ, ಸಹಾಯಕ ಆರ್ ಬೈಚೇಗೌಡ, ಅಧಿಕಾರಿಗಳಾದ ನಾರಾಯಣಸ್ವಾಮಿ, ರಮೇಶ್, ಚಂದ್ರಶೇಖರ್, ನವನೀತ, ಚಂದ್ರಮೋಹನ್ ಸೇರಿದಂತೆ ಗ್ರಾಮಸ್ಥರು, ರೈತರು, ಹಾಲು ಉತ್ಪಾದಕರು ಇದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

4 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

4 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

5 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

6 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

8 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

15 hours ago