Categories: ಕೋಲಾರ

ಚಿಕ್ಕನಹಳ್ಳಿ ಡೇರಿಯಲ್ಲಿ ಸರಕಾರಿ ಸೌಲಭ್ಯಗಳ ಕುರಿತ ಮಾಹಿತಿ ಕಾರ್ಯಾಗಾರ

ಕೋಲಾರ: ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸೋಮವಾರ ಹಾಲು ಉತ್ಪಾದಕರ ಸಹಕಾರ ಸಂಘ, ಕೃಷಿ ಇಲಾಖೆ, ಹಾಗೂ ತೋಟಗಾರಿಕೆ ಇಲಾಖೆಯ ವತಿಯಿಂದ ರೈತರಿಗೆ ಹಾಗೂ ಹಾಲು ಉತ್ಪಾದಕರಿಗೆ ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆ ಸೇರಿದಂತೆ ಸರಕಾರದಿಂದ ಸಿಗುವ ಸೌಲಭ್ಯಗಳು ಕುರಿತಂತೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು,

ಈ ಕಾರ್ಯಾಗಾರದಲ್ಲಿ ಕೃಷಿ ಇಲಾಖೆಯ ಅಭಿಯಂತರ ಎನ್ ಸುನಿಲ್ ಮಾಹಿತಿ ನೀಡಿ ಮಾತನಾಡಿದ ಅವರು, ಸರಕಾರದ ವಿವಿಧ ಇಲಾಖೆಗಳಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ರೈತರಿಗೆ ಅರಿವು ಮೂಡಿಸಿ ಅದರ ಸದುಪಯೋಗವನ್ನು ಗ್ರಾಮದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿದ್ದೇವೆ. ರೈತರಿಗೆ ಹಲವು ರೀತಿಯ ಸೌಲಭ್ಯಗಳು ಇದ್ದರೂ ಈ ಬಗ್ಗೆ ರೈತರಲ್ಲಿ ಮಾಹಿತಿಯ ಕೊರತೆಯಿಂದ ರೈತರಿಗೆ ಸರಿಯಾಗಿ ತಲುಪುತ್ತಿಲ್ಲ. ಮಾಹಿತಿ ಪಡೆದ ಪ್ರತಿಯೊಬ್ಬರೂ ಬೇರೆಯವರಿಗೆ ಮಾಹಿತಿ ನೀಡಿ ಅವರು ಕೂಡ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳುವಂತೆ ಮಾಡಬೇಕಾಗಿದೆ ಎಂದರು.

ರೈತರು ತಮ್ಮ ಸ್ವಂತ ಜಮೀನುಗಳಲ್ಲಿ ಮಳೆ ನೀರು ವ್ಯರ್ಥವಾಗದಂತೆ ಹೊಂಡದಲ್ಲಿ ಸಂಗ್ರಹಿಸಿ ಅದನ್ನು ಕೃಷಿಗೆ ಬಳಸಬಹುದಾಗಿದೆ. ಜೊತೆಗೆ ಬದು ನಿರ್ಮಿಸಿಕೊಂಡು ಮಳೆ ನೀರು ಹಾಗೂ ಮಣ್ಣು ಹೊರಗಡೆ ಹೋಗದಂತೆ ತಡೆಯಬಹುದಾಗಿದೆ. ಕೃಷಿ ಹಾಗೂ ಹೈನುಗಾರಿಕಾ ಚಟುವಟಿಕೆಗಳಿಗೆ ಯಂತ್ರೋಪಕರಣಗಳನ್ನು ನೀಡಲಿದ್ದು, ಇದರ ಸದುಪಯೋಗವನ್ನು ಪಡಿಸಿಕೊಳ್ಳಿ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಚಿಕ್ಕನಹಳ್ಳಿ ಡೇರಿ ಅಧ್ಯಕ್ಷ ಸಿ.ಅಮರೇಶ್, ಕಾರ್ಯದರ್ಶಿ ಆರ್ ಗೋಪಾಲಪ್ಪ, ಸಹಾಯಕ ಆರ್ ಬೈಚೇಗೌಡ, ಅಧಿಕಾರಿಗಳಾದ ನಾರಾಯಣಸ್ವಾಮಿ, ರಮೇಶ್, ಚಂದ್ರಶೇಖರ್, ನವನೀತ, ಚಂದ್ರಮೋಹನ್ ಸೇರಿದಂತೆ ಗ್ರಾಮಸ್ಥರು, ರೈತರು, ಹಾಲು ಉತ್ಪಾದಕರು ಇದ್ದರು.

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

51 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

58 minutes ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

7 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago