ಚಿಕ್ಕಬಳ್ಳಾಪುರದಲ್ಲಿ ಅನಿಷ್ಟ ಪದ್ದತಿ ಇನ್ನೂ ಜೀವಂತ: ಶೌಚಗೃಹದಿಂದ ಒಳಚರಂಡಿಗೆ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ಗೆ ಕಾರ್ಮಿಕನನ್ನು ಇಳಿಸಿ ಸ್ವಚ್ಛ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆ ನಿವಾಸಿಯೊಬ್ಬರು ತಮ್ಮ ಮನೆಯ ಶೌಚಾಲಯದ ಒಳಚರಂಡಿ ಸಂಪರ್ಕದ ಪೈಪ್ ಲೈನ್ ಬ್ಲಾಕ್ ಆಗಿರುವುದನ್ನು ಖಾಸಗಿ ವ್ಯಕ್ತಿಗಳಿಂದ ರಸ್ತೆಯಲ್ಲಿರುವ ಮಾನ್ ಹೋಲ್ ಒಳಗೆ ಇಳಿಸಿ ಸ್ವಚ್ಛಗೊಳಿಸಿರುವುದು ಬೆಳಕಿಗೆ ಬಂದಿದೆ.

2024ರ ಡಿ. 22ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು 2025ರ ಜ.6 ರಂದು ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಘಟನೆಯನ್ನು ಅಪರಿಚಿತರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಚಿಂತಾಮಣಿ ನಗರಸಭೆ ಕಿರಿಯ ಆರೋಗ್ಯ ನಿರೀಕ್ಷಕರು ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ನಂತರ ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡುತ್ತಾರೆ. ದೂರಿನಲ್ಲಿ ಏನಿದೆ….?

ಮ್ಯಾನುಯಲ್ ಸ್ಕ್ಯಾವೆಂಜರ್ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರನ್ವಯ ಯಾರೊಬ್ಬ ಮನುಷ್ಯನನ್ನು ಮ್ಯಾನ್ ಹೋಲ್ ನಲ್ಲಿ ಇಳಿಸಿ ಸ್ವಚ್ಛಗೊಳಿಸುವುದು ಕಾನೂನಿನಂತೆ ಅಪರಾಧವಾಗಿರುತ್ತದೆ.

ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಆಧುನಿಕ ಯಂತ್ರಗಳು ನಗರಸಭೆಯಲ್ಲಿ ಲಭ್ಯವಿದ್ದು, ಮ್ಯಾನ್ ಹೋಲ್ ಹಾಗೂ ಒಳಚರಂಡಿ ಕಟ್ಟಿಕೊಂಡಿರುವ ಬಗ್ಗೆ ಕಚೇರಿಗೆ ಬರುವ ದೂರುಗಳನ್ನು ಸದರಿ ಯಂತ್ರಗಳಿಂದ ಸ್ವಚ್ಛಗೊಳಿಸಲಾಗುತ್ತಿದೆ. ಮ್ಯಾನ್ ಹೋಲ್ ನಲ್ಲಿ ಮನುಷ್ಯನನ್ನು ಇಳಿಸಿ ಸ್ವಚ್ಛಗೊಳಿಸಿರುವುದು ಕಾನೂನಿನಂತೆ ಅಪರಾಧ. ಈ ಕುರಿತು ಕರಪತ್ರ ವಿತರಣೆ ಹಾಗೂ ಧ್ವನಿವರ್ಧಕದ ಮೂಲಕ ಪ್ರಚಾರವನ್ನು ಕೈಗೊಳ್ಳಲಾಗಿರುತ್ತದೆ. ಹಾಗಿದ್ದರೂ ಸಹ ಕಚೇರಿಗೆ ದೂರು ನೀಡದೇ ವ್ಯಕ್ತಿಯೊಬ್ಬರು ತಮ್ಮ ಮನೆ ಮುಂಭಾಗದಲ್ಲಿ ಸ್ವಚ್ಛತೆ ಕೈಗೊಳ್ಳಲು ಅನಧಿಕೃತವಾಗಿ ಮನುಷ್ಯನನ್ನು ಮ್ಯಾನ್ ಹೋಲ್ ಗೆ ಇಳಿಸಿರುವುದು ಕಂಡು ಬಂದಿರುತ್ತದೆ.

ಸ್ಚಚ್ಛಗೊಳಿಸುವಂತೆ ಕಚೇರಿಗೆ ದೂರು ನೀಡಿದ್ದಲ್ಲಿ ಕಚೇರಿಯಲ್ಲಿ ಲಭ್ಯವಿರುವ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರವನ್ನು ಬಳಸಿ ತುರ್ತಾಗಿ ಸ್ವಚ್ಛಗೊಳಿಸಲಾಗುತ್ತಿತ್ತು. ಆದರೆ ಕಚೇರಿ ಗಮನಕ್ಕೆ ತರದೇ ಮನುಷ್ಯನನ್ನು ಮ್ಯಾನ್ ಹೋಲ್ ಗೆ ಇಳಿಸಿರುವುದು ಅಪರಾಧವಾಗಿರುತ್ತದೆ.

ಇದು ಮ್ಯಾನುಯಲ್ ಸ್ಕ್ಯಾವೆಂಜರ್ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರನ್ವಯ ಅಪರಾಧವಾಗಿರುತ್ತದೆ, ಆದ್ದರಿಂದ ಮನೆ ಮಾಲೀಕರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲು ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

3 minutes ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

9 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

10 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

12 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

13 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

13 hours ago